6:05 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪಾಣೆಮಂಗಳೂರಿನಲ್ಲಿ ರಾಜ್ಯೋತ್ಸವ ಆಚರಣೆ: ಜಯಾನಂದ ಪೆರಾಜೆಗೆ ಗೌರವ ಪುರಸ್ಕಾರ

03/11/2024, 11:43

ಬಂಟ್ವಾಳ(reporterkarnataka.com): ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರು ನಾಡಗೀತೆಯನ್ನು ಹಾಡಿ, ಕರ್ನಾಟಕ ಭೂಪಟಕ್ಕೆ ಸಾಂಕೇತಿಕವಾಗಿ 69 ದೀಪಗಳನ್ನು ಹಚ್ಚಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಯಾನಂದ ಪೆರಾಜೆ ಅವರು ಮಾತನಾಡಿ ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡದ ಹಿರಿಮೆ ಗರಿಮೆ, ಕನ್ನಡ ಪರಂಪರೆ ಕನ್ನಡವನ್ನು ಕಟ್ಟಿ ಬೆಳೆಸುವಲ್ಲಿ ಕಾರಣಿಭೂತರಾದ ಕನ್ನಡದ ಮಹಾನ್ ಕವಿಗಳು ಹಾಗೂ ದಕ್ಷಿಣ ಕನ್ನಡದ ಮತ್ತು ಬಂಟ್ವಾಳ ತಾಲೂಕಿನ ಮೇರು ಸಾಹಿತಿಗಳ ಸಾಧನೆಯನ್ನು ಪರಿಚಯಿಸಿದರು. ಮೂಲಕ ಮತ್ತೋರ್ವ ಅತಿಥಿ ಪಾಣೆಮಂಗಳೂರಿನ ಆಶಾ ಕಾರ್ಯಕರ್ತೆ ಜ್ಯೋತಿಲಕ್ಷ್ಮಿ ಅವರು ಉಪಸ್ಥಿತರಿದ್ದರು. ಸಂಚಾಲಕರು ಮತ್ತು ಅಧ್ಯಕ್ಷರು ಸನ್ಮಾನಿಸಿ, ಸ್ಮರಣಿಕೆ ನೀಡಿ ಅತಿಥಿಗಳನ್ನು ಗೌರವಿಸಿ ಸನ್ಮಾನ ಮಾಡಿದರು.
ಶಾಲಾ ಸಂಚಾಲಕ ಡಾ. ಪಿ. ವಿಶ್ವನಾಥ ನಾಯಕ್ , ಮುಖ್ಯೋಪಾಧ್ಯಾಯ ಶಿವಪ್ಪ ನಾಯ್ಕ, ಕನ್ನಡ ರಾಜ್ಯೋತ್ಸವದ ಸಂದೇಶಗಳನ್ನು ತಿಳಿದರು. ನವ್ಯ ಬಳಗದವರು ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು. ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಕವಯಿತ್ರಿ ಸುಧಾ ನಾಗೇಶ್ , ಶಾಲಾ ನಾಯಕ ಮನ್ವಿತ್ ಸಿ. ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ನಾಯ್ಕ ಸ್ವಾಗತಿಸಿ,ಕನ್ನಡ ಭಾಷಾ ಆಧ್ಯಾಪಕ ಧನರಾಜ್ ದೊಡ್ಡನೇರಳೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಶೈಮಾ ಪ್ರಶಸ್ತಿ ಪತ್ರ ವಾಚಿಸಿ, ಖತೀಜತುಲ್ ಸಹಬೀರ ಧನ್ಯವಾದವಿತ್ತರು. ಅಬ್ದುಲ್ ರಾಝಿಕ್ ನಿರೂಪಿಸಿದರು..

ಇತ್ತೀಚಿನ ಸುದ್ದಿ

ಜಾಹೀರಾತು