4:44 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಪಾಠ ಕೇಳೋದು ಬಿಟ್ಟು ಊಟಕ್ಕೆ ನೀರು ತರಲು ಹೋದ ಸರಕಾರಿ ಶಾಲೆ ಮಕ್ಕಳು!!

13/07/2023, 13:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇಲ್ವಾ ಎಂದು ಪ್ರಶ್ನಿಸಬೇಡಿ. ಇದೆ. ಆದರೆ, ದೊಡ್ಡವರ ಹಗ್ಗಜಗ್ಗಾಟದಲ್ಲಿ ಮಕ್ಕಳು ಪಾಠ ಕೇಳೋದು ಬಿಟ್ಟು ನೀರು ತರುವಂತಾಗಿದೆ. ಶಾಲೆಯ ಮುಖ್ಯೋಪಾಧ್ಯರು ಕಳೆದೊಂದು ವಾರದಿಂದ ರಜೆ ಇದ್ದಾರೆ. ಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಕೂಡ ಹಾಳಾಗಿದೆ.

ಆದರೆ, ಪೈಪ್ ಲೈನ್ ಹಾಳಾಗಿದೆ ಎಂದು ಶಾಲೆಯವರು ಗ್ರಾಮ ಪಂಚಾಯಿತಿಗೆ ಹೇಳಿದ್ದಾರೋ… ಇಲ್ಲವೋ… ಗೊತ್ತಿಲ್ಲ. ಆದರೆ, ಈಗ ಒಬ್ಬರ ಮೇಲೋಬ್ಬರು ಗೂಬೆ ಕೂರಿಸಿತ್ತಾ ಮಕ್ಕಳ ಕೈನಲ್ಲಿ ಬಿಸಿಯೂಟಕ್ಕೆ ನೀರು ಹೋರಿಸುತ್ತಿದ್ದಾರೆ. ಈಗ ಪಂಚಾಯಿತಿಯವರು ಶಾಲೆಯವರು ನಮಗೆ ಈ ವಿಷಯವನ್ನೇ ಹೇಳಿಲ್ಲ ಅಂತಿದ್ದಾರೆ. ಆದರೆ, ಶಾಲೆಯವರು ನಾವು ಪಂಚಾಯಿತಿಯವರಿಗೆ ಹೇಳಿದ್ದೇವೆ ಅವರು ರಿಪೇರಿ ಮಾಡಿಲ್ಲ ಎಂದು ಪಂಚಾಯಿತಿಯವರ ಮೇಲೆ ಹೇಳುತ್ತಿದ್ದಾರೆ. ಯಾರು ಯಾರಿಗೆ ಹೇಳಿದ್ದಾರೋ.. ಇಲ್ವೋ… ಆದರೆ, ಈಗ ಮಕ್ಕಳು ಪಾಠ ಕೇಳೋದ ಬಿಟ್ಟು ಶಾಲೆಯ ಬಿಸಿಯೂಟಕ್ಕೆ ನೀರು ಹೊರುತ್ತಿದ್ದಾರೆ. ನೀರು ಹೊತ್ತು ಸುಸ್ತಾದ ಮಕ್ಕಲೇ ಪೈಪ್ ಲೈನ್ ದುರಸ್ಥಿ ಮಾಡಲು ಮುಂದಾಗಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಹಾಗಾಗಿ, ಕೊನೆಗೆ ಅನಿವಾರ್ಯವಾಗಿ ಮಕ್ಕಳು ನೀರು ಹೊತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟವರೆ ಉತ್ತರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು