12:16 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಪಾಠ ಕೇಳೋದು ಬಿಟ್ಟು ಊಟಕ್ಕೆ ನೀರು ತರಲು ಹೋದ ಸರಕಾರಿ ಶಾಲೆ ಮಕ್ಕಳು!!

13/07/2023, 13:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇಲ್ವಾ ಎಂದು ಪ್ರಶ್ನಿಸಬೇಡಿ. ಇದೆ. ಆದರೆ, ದೊಡ್ಡವರ ಹಗ್ಗಜಗ್ಗಾಟದಲ್ಲಿ ಮಕ್ಕಳು ಪಾಠ ಕೇಳೋದು ಬಿಟ್ಟು ನೀರು ತರುವಂತಾಗಿದೆ. ಶಾಲೆಯ ಮುಖ್ಯೋಪಾಧ್ಯರು ಕಳೆದೊಂದು ವಾರದಿಂದ ರಜೆ ಇದ್ದಾರೆ. ಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಕೂಡ ಹಾಳಾಗಿದೆ.

ಆದರೆ, ಪೈಪ್ ಲೈನ್ ಹಾಳಾಗಿದೆ ಎಂದು ಶಾಲೆಯವರು ಗ್ರಾಮ ಪಂಚಾಯಿತಿಗೆ ಹೇಳಿದ್ದಾರೋ… ಇಲ್ಲವೋ… ಗೊತ್ತಿಲ್ಲ. ಆದರೆ, ಈಗ ಒಬ್ಬರ ಮೇಲೋಬ್ಬರು ಗೂಬೆ ಕೂರಿಸಿತ್ತಾ ಮಕ್ಕಳ ಕೈನಲ್ಲಿ ಬಿಸಿಯೂಟಕ್ಕೆ ನೀರು ಹೋರಿಸುತ್ತಿದ್ದಾರೆ. ಈಗ ಪಂಚಾಯಿತಿಯವರು ಶಾಲೆಯವರು ನಮಗೆ ಈ ವಿಷಯವನ್ನೇ ಹೇಳಿಲ್ಲ ಅಂತಿದ್ದಾರೆ. ಆದರೆ, ಶಾಲೆಯವರು ನಾವು ಪಂಚಾಯಿತಿಯವರಿಗೆ ಹೇಳಿದ್ದೇವೆ ಅವರು ರಿಪೇರಿ ಮಾಡಿಲ್ಲ ಎಂದು ಪಂಚಾಯಿತಿಯವರ ಮೇಲೆ ಹೇಳುತ್ತಿದ್ದಾರೆ. ಯಾರು ಯಾರಿಗೆ ಹೇಳಿದ್ದಾರೋ.. ಇಲ್ವೋ… ಆದರೆ, ಈಗ ಮಕ್ಕಳು ಪಾಠ ಕೇಳೋದ ಬಿಟ್ಟು ಶಾಲೆಯ ಬಿಸಿಯೂಟಕ್ಕೆ ನೀರು ಹೊರುತ್ತಿದ್ದಾರೆ. ನೀರು ಹೊತ್ತು ಸುಸ್ತಾದ ಮಕ್ಕಲೇ ಪೈಪ್ ಲೈನ್ ದುರಸ್ಥಿ ಮಾಡಲು ಮುಂದಾಗಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಹಾಗಾಗಿ, ಕೊನೆಗೆ ಅನಿವಾರ್ಯವಾಗಿ ಮಕ್ಕಳು ನೀರು ಹೊತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟವರೆ ಉತ್ತರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು