4:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಚ್ಚನಾಡಿ ಅಕ್ರಮ ಮನೆಗಳ ವಾರದೊಳಗೆ ತೆರವು ಮಾಡದಿದ್ದರೆ ತ್ಯಾಜ್ಯ ವಿಲೇವಾರಿ ಸ್ಥಗಿತ: ಪಾಲಿಕೆಗೆ ದಲಿತ ಮುಖಂಡರ ಎಚ್ಚರಿಕೆ

11/06/2022, 17:10

ಮಂಗಳೂರು(reporterkarnataka.com):  ನಗರದ ಪಚ್ಚನಾಡಿಯಲ್ಲಿ ಪೌರ ಕಾರ್ಮಿಕರಿಗೆ ಮೀಸiಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಒಂದು ವಾರದೊಳಗೆ ತೆರವು ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಸ್.ಪಿ.ಆನಂದ್ ಎಚ್ಚರಿಕೆ ನೀಡಿದ್ದಾರೆ.

ರಿಪೋರ್ಟರ್ ಕರ್ನಾಟಕ ಜತೆ ಶನಿವಾರ ಮಾತನಾಡಿದ ಅವರು, ವಾರದೊಳಗೆ ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು.

4 ಎಕರೆ ಸ್ಥಳ ಸರಿ ಸುಮಾರು 200 ಪೌರ ಕಾರ್ಮಿಕರಿಗೆ ತಲಾ2 ಸೆಂಟ್ ನ ಹಾಗೆ ಮೀಸಲಿರಿಸಿದ ಸ್ಥಳ.  ಇತೀಚೆಗೆ ಸಹ ಪರವಾನಿಗೆ ಇಲ್ಲದೇ ಹಲವರು ಅತಿಕ್ರಮಿಸಿ ಮನೆ ನಿರ್ಮಾಣವಾಗುತ್ತಿದ್ದಾಗ

ಇದರ ಬಗ್ಗೆ ದಲಿತ ಸಂಘರ್ಷ ಸಮಿತಿ  ಹಾಗೂ ಪೌರ ಕಾರ್ಮಿಕರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರಿಂದ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರ ಆದೇಶದ ಮೇರೆಗೆ ನಗರ ಪಾಲಿಕೆಯ ನಗರ ಯೋಜನೆ  ಅಧಿಕಾರಿಗಳು ಸ್ಥಳೀಯ ಪೋಲಿಸ್ ಇಲಾಖೆಯ ಸಹಾಕಾರದೊಂದಿಗೆ ತೆರವು ಮಾಡಲು ಮುಂದಾಗಿದ್ದರು. ಆದರೆ ಅಲ್ಲಿನ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್ ಹಾಗೂ ಅವರ ಪತಿ ರವಿಂದ್ರ ನಾಯಕ್  ಹಾಗೂ ಸ್ಥಳೀಯ ಕೆಲವರು ತೆರವು ಮಾಡಲು ತಡೆಮಾಡಿದ್ದಾರೆ. ಪಾಲಿಕೆ ತೆರವಿಗೆ ಇನ್ನೊಂದು ವಾರ ಗಡುವು ನೀಡುತ್ತೇವೆ. ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ  ಉಗ್ರ ಹೋರಟ ನಡೆಸುವುದಾಗಿ ಆನಂದ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು