3:08 AM Tuesday26 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಪಚ್ಚನಾಡಿ ಅಕ್ರಮ ಮನೆಗಳ ವಾರದೊಳಗೆ ತೆರವು ಮಾಡದಿದ್ದರೆ ತ್ಯಾಜ್ಯ ವಿಲೇವಾರಿ ಸ್ಥಗಿತ: ಪಾಲಿಕೆಗೆ ದಲಿತ ಮುಖಂಡರ ಎಚ್ಚರಿಕೆ

11/06/2022, 17:10

ಮಂಗಳೂರು(reporterkarnataka.com):  ನಗರದ ಪಚ್ಚನಾಡಿಯಲ್ಲಿ ಪೌರ ಕಾರ್ಮಿಕರಿಗೆ ಮೀಸiಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಒಂದು ವಾರದೊಳಗೆ ತೆರವು ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಸ್.ಪಿ.ಆನಂದ್ ಎಚ್ಚರಿಕೆ ನೀಡಿದ್ದಾರೆ.

ರಿಪೋರ್ಟರ್ ಕರ್ನಾಟಕ ಜತೆ ಶನಿವಾರ ಮಾತನಾಡಿದ ಅವರು, ವಾರದೊಳಗೆ ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು.

4 ಎಕರೆ ಸ್ಥಳ ಸರಿ ಸುಮಾರು 200 ಪೌರ ಕಾರ್ಮಿಕರಿಗೆ ತಲಾ2 ಸೆಂಟ್ ನ ಹಾಗೆ ಮೀಸಲಿರಿಸಿದ ಸ್ಥಳ.  ಇತೀಚೆಗೆ ಸಹ ಪರವಾನಿಗೆ ಇಲ್ಲದೇ ಹಲವರು ಅತಿಕ್ರಮಿಸಿ ಮನೆ ನಿರ್ಮಾಣವಾಗುತ್ತಿದ್ದಾಗ

ಇದರ ಬಗ್ಗೆ ದಲಿತ ಸಂಘರ್ಷ ಸಮಿತಿ  ಹಾಗೂ ಪೌರ ಕಾರ್ಮಿಕರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರಿಂದ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರ ಆದೇಶದ ಮೇರೆಗೆ ನಗರ ಪಾಲಿಕೆಯ ನಗರ ಯೋಜನೆ  ಅಧಿಕಾರಿಗಳು ಸ್ಥಳೀಯ ಪೋಲಿಸ್ ಇಲಾಖೆಯ ಸಹಾಕಾರದೊಂದಿಗೆ ತೆರವು ಮಾಡಲು ಮುಂದಾಗಿದ್ದರು. ಆದರೆ ಅಲ್ಲಿನ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್ ಹಾಗೂ ಅವರ ಪತಿ ರವಿಂದ್ರ ನಾಯಕ್  ಹಾಗೂ ಸ್ಥಳೀಯ ಕೆಲವರು ತೆರವು ಮಾಡಲು ತಡೆಮಾಡಿದ್ದಾರೆ. ಪಾಲಿಕೆ ತೆರವಿಗೆ ಇನ್ನೊಂದು ವಾರ ಗಡುವು ನೀಡುತ್ತೇವೆ. ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ  ಉಗ್ರ ಹೋರಟ ನಡೆಸುವುದಾಗಿ ಆನಂದ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು