5:43 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಪಚ್ಚನಾಡಿ ಅಕ್ರಮ ಮನೆಗಳ ವಾರದೊಳಗೆ ತೆರವು ಮಾಡದಿದ್ದರೆ ತ್ಯಾಜ್ಯ ವಿಲೇವಾರಿ ಸ್ಥಗಿತ: ಪಾಲಿಕೆಗೆ ದಲಿತ ಮುಖಂಡರ ಎಚ್ಚರಿಕೆ

11/06/2022, 17:10

ಮಂಗಳೂರು(reporterkarnataka.com):  ನಗರದ ಪಚ್ಚನಾಡಿಯಲ್ಲಿ ಪೌರ ಕಾರ್ಮಿಕರಿಗೆ ಮೀಸiಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಒಂದು ವಾರದೊಳಗೆ ತೆರವು ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಸ್.ಪಿ.ಆನಂದ್ ಎಚ್ಚರಿಕೆ ನೀಡಿದ್ದಾರೆ.

ರಿಪೋರ್ಟರ್ ಕರ್ನಾಟಕ ಜತೆ ಶನಿವಾರ ಮಾತನಾಡಿದ ಅವರು, ವಾರದೊಳಗೆ ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು.

4 ಎಕರೆ ಸ್ಥಳ ಸರಿ ಸುಮಾರು 200 ಪೌರ ಕಾರ್ಮಿಕರಿಗೆ ತಲಾ2 ಸೆಂಟ್ ನ ಹಾಗೆ ಮೀಸಲಿರಿಸಿದ ಸ್ಥಳ.  ಇತೀಚೆಗೆ ಸಹ ಪರವಾನಿಗೆ ಇಲ್ಲದೇ ಹಲವರು ಅತಿಕ್ರಮಿಸಿ ಮನೆ ನಿರ್ಮಾಣವಾಗುತ್ತಿದ್ದಾಗ

ಇದರ ಬಗ್ಗೆ ದಲಿತ ಸಂಘರ್ಷ ಸಮಿತಿ  ಹಾಗೂ ಪೌರ ಕಾರ್ಮಿಕರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರಿಂದ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರ ಆದೇಶದ ಮೇರೆಗೆ ನಗರ ಪಾಲಿಕೆಯ ನಗರ ಯೋಜನೆ  ಅಧಿಕಾರಿಗಳು ಸ್ಥಳೀಯ ಪೋಲಿಸ್ ಇಲಾಖೆಯ ಸಹಾಕಾರದೊಂದಿಗೆ ತೆರವು ಮಾಡಲು ಮುಂದಾಗಿದ್ದರು. ಆದರೆ ಅಲ್ಲಿನ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್ ಹಾಗೂ ಅವರ ಪತಿ ರವಿಂದ್ರ ನಾಯಕ್  ಹಾಗೂ ಸ್ಥಳೀಯ ಕೆಲವರು ತೆರವು ಮಾಡಲು ತಡೆಮಾಡಿದ್ದಾರೆ. ಪಾಲಿಕೆ ತೆರವಿಗೆ ಇನ್ನೊಂದು ವಾರ ಗಡುವು ನೀಡುತ್ತೇವೆ. ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ  ಉಗ್ರ ಹೋರಟ ನಡೆಸುವುದಾಗಿ ಆನಂದ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು