11:50 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ: ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ; ಬೆಂಕಿ ನಿಯಂತ್ರಣಕ್ಕೆ ಕ್ರಮ

06/01/2023, 18:57

ಮಂಗಳೂರು(reporter Karnataka.com): ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ತ್ಯಾಜ್ಯದಿಂದ ಮಿಥೇಲ್ ಗ್ಯಾಸ್ ಹೊರಹೊಮ್ಮಿದಾಗ ವಾತಾವರಣದ ಉಷ್ಣತೆಗೆ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಾಗಿದೆ. ಇದೀಗ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಶುಕ್ರವಾರ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜ್ವಾಲೆ ಇನ್ನಷ್ಟು ಪ್ರದೇಶಕ್ಕೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಈ ಸಂದರ್ಭದಲ್ಲಿ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು, ಪ್ರತಿ ವರ್ಷ ಬೇಸಿಗೆಯಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮಿಥೇಲ್ ಗ್ಯಾಸ್ ಬಿಡುಗಡೆಯಾಗುವುದರಿಂದ ಬೆಂಕಿ ಹತ್ತಿಕೊಳ್ಳುತ್ತದೆ. ಬೆಂಕಿ ನಿಯಂತ್ರಿಸಲು 10 ಅಗ್ನಿಶಾಮಕ ದಳದ ವಾಹನಗಳನ್ನು ತರಿಸಲಾಗಿದೆ.


ಪಾಲಿಕೆ, ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ
ಸುಮಾರು 100 ಮಂದಿ ಬೆಂಕಿ ನಿಯಂತ್ರಣ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು