9:04 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ: ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ; ಬೆಂಕಿ ನಿಯಂತ್ರಣಕ್ಕೆ ಕ್ರಮ

06/01/2023, 18:57

ಮಂಗಳೂರು(reporter Karnataka.com): ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ತ್ಯಾಜ್ಯದಿಂದ ಮಿಥೇಲ್ ಗ್ಯಾಸ್ ಹೊರಹೊಮ್ಮಿದಾಗ ವಾತಾವರಣದ ಉಷ್ಣತೆಗೆ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಾಗಿದೆ. ಇದೀಗ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಶುಕ್ರವಾರ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜ್ವಾಲೆ ಇನ್ನಷ್ಟು ಪ್ರದೇಶಕ್ಕೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಈ ಸಂದರ್ಭದಲ್ಲಿ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು, ಪ್ರತಿ ವರ್ಷ ಬೇಸಿಗೆಯಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮಿಥೇಲ್ ಗ್ಯಾಸ್ ಬಿಡುಗಡೆಯಾಗುವುದರಿಂದ ಬೆಂಕಿ ಹತ್ತಿಕೊಳ್ಳುತ್ತದೆ. ಬೆಂಕಿ ನಿಯಂತ್ರಿಸಲು 10 ಅಗ್ನಿಶಾಮಕ ದಳದ ವಾಹನಗಳನ್ನು ತರಿಸಲಾಗಿದೆ.


ಪಾಲಿಕೆ, ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ
ಸುಮಾರು 100 ಮಂದಿ ಬೆಂಕಿ ನಿಯಂತ್ರಣ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು