4:32 PM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ: ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ; ಬೆಂಕಿ ನಿಯಂತ್ರಣಕ್ಕೆ ಕ್ರಮ

06/01/2023, 18:57

ಮಂಗಳೂರು(reporter Karnataka.com): ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ತ್ಯಾಜ್ಯದಿಂದ ಮಿಥೇಲ್ ಗ್ಯಾಸ್ ಹೊರಹೊಮ್ಮಿದಾಗ ವಾತಾವರಣದ ಉಷ್ಣತೆಗೆ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಾಗಿದೆ. ಇದೀಗ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಶುಕ್ರವಾರ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜ್ವಾಲೆ ಇನ್ನಷ್ಟು ಪ್ರದೇಶಕ್ಕೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಈ ಸಂದರ್ಭದಲ್ಲಿ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು, ಪ್ರತಿ ವರ್ಷ ಬೇಸಿಗೆಯಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮಿಥೇಲ್ ಗ್ಯಾಸ್ ಬಿಡುಗಡೆಯಾಗುವುದರಿಂದ ಬೆಂಕಿ ಹತ್ತಿಕೊಳ್ಳುತ್ತದೆ. ಬೆಂಕಿ ನಿಯಂತ್ರಿಸಲು 10 ಅಗ್ನಿಶಾಮಕ ದಳದ ವಾಹನಗಳನ್ನು ತರಿಸಲಾಗಿದೆ.


ಪಾಲಿಕೆ, ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ
ಸುಮಾರು 100 ಮಂದಿ ಬೆಂಕಿ ನಿಯಂತ್ರಣ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು