4:25 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಕಾಮಗಾರಿಗೆ ಸಿಎಂ ಅನುಮೋದನೆ: ಹೈಕೋರ್ಟ್ ಗೆ ರಾಜ್ಯ ಸರಕಾರ ಸ್ಪಷ್ಟನೆ

09/03/2022, 23:19

ಬೆಂಗಳೂರು(reporterkarnataka.com) ಮಂಗಳೂರಿನ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಎರಡು ವರ್ಷಗಳ ಹಿಂದೆ ಭೀಕರ ತ್ಯಾಜ್ಯ ದುರಂತ ಸಂಭವಿಸಿದ ಬಳಿಕ ರಾಜ್ಯಾದ್ಯಂತ ಸುದ್ದಿ ಮಾಡಿದ  ಪಚ್ಚನಾಡಿ ಘನತ್ಯಾಜ್ಯ ಘಟಕದಲ್ಲಿ ಕೆಲವು ದಶಕಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ಸ್ಥಳಾಂತರಿಸುವ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು 73 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿದ್ದಾರೆ ಎಂದು ಸರಕಾರದ ಪರ ವಾದಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಪೀಠಕ್ಕೆ ತಿಳಿಸಿದರು.

ಘನತ್ಯಾಜ್ಯ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಭರ್ತಿಯಾಗಿ ನಡೆದ ತ್ಯಾಜ್ಯ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಸಲಾಯಿತು.

ಸಿಎಂ ಅನುಮೋದನೆ ನೀಡಿದ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸಬೇಕು. ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಬಗ್ಗೆ ಕಾಲಕಾಲಕ್ಕೆ ವರದಿಯನ್ನು ಸಲ್ಲಿಸಬೇಕೆಂದು ಹೈಕೋರ್ಟ್ ತಿಳಿಸಿದೆ. 


ಅರ್ಜಿಯ ಮುಂದಿನ ವಿಚಾರಣೆಗೆ ಮಂಗಳೂರು ಪಾಲಿಕೆ ಆಯುಕ್ತರು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು