10:41 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಕಾಮಗಾರಿಗೆ ಸಿಎಂ ಅನುಮೋದನೆ: ಹೈಕೋರ್ಟ್ ಗೆ ರಾಜ್ಯ ಸರಕಾರ ಸ್ಪಷ್ಟನೆ

09/03/2022, 23:19

ಬೆಂಗಳೂರು(reporterkarnataka.com) ಮಂಗಳೂರಿನ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಎರಡು ವರ್ಷಗಳ ಹಿಂದೆ ಭೀಕರ ತ್ಯಾಜ್ಯ ದುರಂತ ಸಂಭವಿಸಿದ ಬಳಿಕ ರಾಜ್ಯಾದ್ಯಂತ ಸುದ್ದಿ ಮಾಡಿದ  ಪಚ್ಚನಾಡಿ ಘನತ್ಯಾಜ್ಯ ಘಟಕದಲ್ಲಿ ಕೆಲವು ದಶಕಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ಸ್ಥಳಾಂತರಿಸುವ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು 73 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿದ್ದಾರೆ ಎಂದು ಸರಕಾರದ ಪರ ವಾದಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಪೀಠಕ್ಕೆ ತಿಳಿಸಿದರು.

ಘನತ್ಯಾಜ್ಯ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಭರ್ತಿಯಾಗಿ ನಡೆದ ತ್ಯಾಜ್ಯ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಸಲಾಯಿತು.

ಸಿಎಂ ಅನುಮೋದನೆ ನೀಡಿದ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸಬೇಕು. ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಬಗ್ಗೆ ಕಾಲಕಾಲಕ್ಕೆ ವರದಿಯನ್ನು ಸಲ್ಲಿಸಬೇಕೆಂದು ಹೈಕೋರ್ಟ್ ತಿಳಿಸಿದೆ. 


ಅರ್ಜಿಯ ಮುಂದಿನ ವಿಚಾರಣೆಗೆ ಮಂಗಳೂರು ಪಾಲಿಕೆ ಆಯುಕ್ತರು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು