6:34 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!!

11/06/2022, 14:09

ಮಂಗಳೂರು(reporterkarnataka.com): 

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. 

ಪಾಲಿಕೆಯ ಸದಸ್ಯೆ ಸಂಗಿತಾ ಆರ್.ನಾಯಕ್ 
ಹಾಗೂ ಸ್ಥಳಿಯರು ತೆರವು ಮಾಡಲು ತಡೆಯೊಡ್ಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆಗೆ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರೂ ಈ ವಿಷಯ ಗೊತ್ತಾಗಿ ಮನೆಯೊಳಗೆ ಮಹಿಳೆಯರು ಸೇರಿದಂತೆ ಮನೆ ಮಂದಿಯನ್ನು ಮಲಗಿಸಿ ಕಾರ್ಯಾಚರಣೆಗೆ ಅಡ್ಡಿಪಡಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ 

ಕಾರ್ಪೊರೇಟರ್ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಒಂದು ಮನೆಯ ಗೃಹಪ್ರವೇಶ ಕೂಡ ಆಗಿದೆ.

ಇಲ್ಲಿ ಸುಮಾರು 2 ಎಕರೆ ಭೂಮಿ ಇದ್ದು, ಈ ಹಿಂದೆ ಅದರಲ್ಲಿ ಕೆಲವು ಪೌರ ಕಾರ್ಮಿಕರು ಸಕ್ರಮವಾಗಿ ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಉಳಿದ ಶೇ. 75ರಷ್ಟು ಖಾಲಿ ನಿವೇಶನವಿದ್ದು, ಪೌರ ಕಾರ್ಮಿಕರಿಗೆ ಮೀಸಲಿಡಲಾಗಿದೆ. ಆದರೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಈ ಜಾಗದಲ್ಲಿ ಈ ಹಿಂದೆ 2020 ರಲ್ಲಿ ಅಪರಿಚಿತರು ಅಕ್ರಮವಾಗಿ 9 ಮನೆ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸುವಾಗ ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದಿದ್ದರು. ಇದೀಗ ಅಲ್ಲಿ ಒಂದು ಮನೆ ಗೃಹ ಪ್ರವೇಶವಾಗಿ, 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು