5:43 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!!

11/06/2022, 14:09

ಮಂಗಳೂರು(reporterkarnataka.com): 

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. 

ಪಾಲಿಕೆಯ ಸದಸ್ಯೆ ಸಂಗಿತಾ ಆರ್.ನಾಯಕ್ 
ಹಾಗೂ ಸ್ಥಳಿಯರು ತೆರವು ಮಾಡಲು ತಡೆಯೊಡ್ಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆಗೆ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರೂ ಈ ವಿಷಯ ಗೊತ್ತಾಗಿ ಮನೆಯೊಳಗೆ ಮಹಿಳೆಯರು ಸೇರಿದಂತೆ ಮನೆ ಮಂದಿಯನ್ನು ಮಲಗಿಸಿ ಕಾರ್ಯಾಚರಣೆಗೆ ಅಡ್ಡಿಪಡಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ 

ಕಾರ್ಪೊರೇಟರ್ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಒಂದು ಮನೆಯ ಗೃಹಪ್ರವೇಶ ಕೂಡ ಆಗಿದೆ.

ಇಲ್ಲಿ ಸುಮಾರು 2 ಎಕರೆ ಭೂಮಿ ಇದ್ದು, ಈ ಹಿಂದೆ ಅದರಲ್ಲಿ ಕೆಲವು ಪೌರ ಕಾರ್ಮಿಕರು ಸಕ್ರಮವಾಗಿ ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಉಳಿದ ಶೇ. 75ರಷ್ಟು ಖಾಲಿ ನಿವೇಶನವಿದ್ದು, ಪೌರ ಕಾರ್ಮಿಕರಿಗೆ ಮೀಸಲಿಡಲಾಗಿದೆ. ಆದರೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಈ ಜಾಗದಲ್ಲಿ ಈ ಹಿಂದೆ 2020 ರಲ್ಲಿ ಅಪರಿಚಿತರು ಅಕ್ರಮವಾಗಿ 9 ಮನೆ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸುವಾಗ ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದಿದ್ದರು. ಇದೀಗ ಅಲ್ಲಿ ಒಂದು ಮನೆ ಗೃಹ ಪ್ರವೇಶವಾಗಿ, 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು