12:51 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!!

11/06/2022, 14:09

ಮಂಗಳೂರು(reporterkarnataka.com): 

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. 

ಪಾಲಿಕೆಯ ಸದಸ್ಯೆ ಸಂಗಿತಾ ಆರ್.ನಾಯಕ್ 
ಹಾಗೂ ಸ್ಥಳಿಯರು ತೆರವು ಮಾಡಲು ತಡೆಯೊಡ್ಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆಗೆ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರೂ ಈ ವಿಷಯ ಗೊತ್ತಾಗಿ ಮನೆಯೊಳಗೆ ಮಹಿಳೆಯರು ಸೇರಿದಂತೆ ಮನೆ ಮಂದಿಯನ್ನು ಮಲಗಿಸಿ ಕಾರ್ಯಾಚರಣೆಗೆ ಅಡ್ಡಿಪಡಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ 

ಕಾರ್ಪೊರೇಟರ್ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಒಂದು ಮನೆಯ ಗೃಹಪ್ರವೇಶ ಕೂಡ ಆಗಿದೆ.

ಇಲ್ಲಿ ಸುಮಾರು 2 ಎಕರೆ ಭೂಮಿ ಇದ್ದು, ಈ ಹಿಂದೆ ಅದರಲ್ಲಿ ಕೆಲವು ಪೌರ ಕಾರ್ಮಿಕರು ಸಕ್ರಮವಾಗಿ ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಉಳಿದ ಶೇ. 75ರಷ್ಟು ಖಾಲಿ ನಿವೇಶನವಿದ್ದು, ಪೌರ ಕಾರ್ಮಿಕರಿಗೆ ಮೀಸಲಿಡಲಾಗಿದೆ. ಆದರೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಈ ಜಾಗದಲ್ಲಿ ಈ ಹಿಂದೆ 2020 ರಲ್ಲಿ ಅಪರಿಚಿತರು ಅಕ್ರಮವಾಗಿ 9 ಮನೆ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸುವಾಗ ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದಿದ್ದರು. ಇದೀಗ ಅಲ್ಲಿ ಒಂದು ಮನೆ ಗೃಹ ಪ್ರವೇಶವಾಗಿ, 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು