3:01 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟ: ಬಣಕಲ್ ನಜರೆತ್ ಶಾಲೆಗೆ ಕಂಚಿನ ಪದಕ

29/09/2023, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿಐಎಸ್ ಸಿಇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಎಚ್. ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ.

14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿ ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. ಉತ್ತಮ ತಂಡವನ್ನು ಸಜ್ಜುಗೊಳಿಸಿದ್ದರು. ನಜರೆತ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ತನ್ಮಯ್ ಗೌಡ ಡಿ. ಆರ್. ಮತ್ತು ವಿಧಾತ್ ಟಿ. ಗೌಡ ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲೆಯ ಪ್ರಾಂಶುಪಾಲೆ ಹಿಲ್ಡಾ ಲೋಬೋ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು