2:13 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಪಶ್ಚಿಮವಾಹಿನಿ ಯೋಜನೆ: ಕೃಷಿ ಹಾಗೂ ಕುಡಿಯುವ ನೀರಿಗೆ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣ

03/07/2021, 22:10

ಮಂಗಳೂರು(reporterkarnataka news): ಪಶ್ಚಿಮವಾಹಿನಿ ಯೋಜನೆಯಡಿ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಆ ಯೋಜನೆಯಿಂದ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ. ಸಿ. ಮಧುಸ್ವಾಮಿ  ಹೇಳಿದರು.

ಅವರು ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ  ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕೈಗೊಳ್ಳಲಾದ ವಿವಿಧ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ನುಡಿದರು.

ಇಲಾಖೆಯಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರೆಯಲಾದ ಟೆಂಡರುಗಳನ್ನು ಬೇಗ ಅನುಮತಿ ನೀಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಮಾಸ್ಟರ್ ಪ್ಲಾನ್ ಅನ್ನು ಸಂಬಂಧಿಸಿದ ಶಾಸಕರ ಗಮನಕ್ಕೆ ತರಲಾಗುವುದು. ಶಾಸಕರು ಸೂಚಿಸುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್, ಯು.ಟಿ. ಖಾದರ್, ಸಂಜೀವ ಮಠಂದೂರು, ಭರತ್ ಶೆಟ್ಟಿ, ಇಲಾಖೆಯ ಕಾರ್ಯದರ್ಶಿಗಳಾದ ಮೃತ್ಯುಂಜಯ ಸ್ವಾಮಿ, ಇಲಾಖೆಯ ಮೈಸೂರು ವೃತ್ತದ ಎಸ್ ಸಿ ರಾಜಶೇಖರ ಯಡಳ್ಳಿ, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಗೋಕುಲದಾಸ್,  ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ವಿಷ್ಣು ಕಾಮತ್, ಸಿಬ್ಬಂದಿಗಳಾದ ಶಿವ ಪ್ರಸನ್ನ, ರಾಕೇಶ್, ಆನಂದ್, ಲವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು