11:37 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಪದವಿ ಕಾಲೇಜಿನ ಹಿಜಾಬ್ ವಿವಾದ: ವಿದ್ಯಾರ್ಥಿ  ಮುಖಂಡರ ಜತೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸಚಿವ ಡಾ.ಅಶ್ವತ್ಥ ನಾರಾಯಣ ಭೇಟಿ

19/02/2022, 10:30

ಬೆಂಗಳೂರು(reporterkarnataka.com): ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಕೆಲವು ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುತ್ತಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ಮುಖಂಡರೊಂದಿಗೆ ಸಚಿವ ಅಶ್ವತ್ಥ ನಾರಾಯಣ ಅವರನ್ನು ಪ್ರತಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್ ಭೇಟಿ ಮಾಡಿ ಮಾತುಕತೆ ನಡೆಸಿದರು.


ಈ ಸಂದರ್ಭದಲ್ಲಿ ಸಚಿವ  ಅಶ್ವತ್ಥ ನಾರಾಯಣ ರವರು ನಿರ್ದಿಷ್ಟ ಸಮವಸ್ತ್ರ ನಿಗದಿಪಡಿಸದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ ಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಮೂಡಿಸಬಾರದೆಂದು ಸ್ಪಷ್ಟವಾಗಿ ತಿಳಿಸಿದ್ದು ಕೆಲವು CBSE ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿಯು ಸಮವಸ್ತ್ರ ನಿಗದಿಪಡಿಸಿದ್ದಲ್ಲಿ ಕೋರ್ಟ್ ಆದೇಶವನ್ನು ಪರಿಗಣಿಸಿ ವ್ಯವಸ್ಥಿತ ರೀತಿಯಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕೆಂದು ಅವರು ತಿಳಿಸಿದರು.

ಕಾಲೇಜು ಅಥವಾ ಶಾಲಾ ಗೇಟುಗಳಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ತಡೆಯುವಂತಿಲ್ಲ. ಕಾಲೇಜು ಅಥವಾ ಶಾಲಾ ಆವರಣದಲ್ಲಿ ಹಿಜಾಬ್ ಧರಿಸಬಹುದಾಗಿಯೂ, ಅಲ್ಲದೇ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂಬುದಾಗಿ ಸ್ಪಷ್ಟವಾಗಿ ತಿಳಿಸಿದರು.

ನಂತರ ಯು.ಟಿ.ಖಾದರ್ ನೇತೃತ್ವದ ಶಾಸಕರ ನೀಯೋಗ ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿ ಮಾಡಿ ಕೂಡಾ ಹಿಜಾಬ್ ವಿವಾದದ ಬಗ್ಗೆ ಮಾತುಕತೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು