3:52 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪದವಿನಂಗಡಿ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ ಪ್ರತಿಷ್ಠಾವರ್ಧಂತಿ; ಕೋಲ ಸೇವೆ ಸಂಪನ್ನ

05/12/2023, 19:52

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ನಡೆಯಿತು.
ಸಾನಿಧ್ಯದ ಯಜಮಾನ ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.


ಅಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯಕ್ಷದ್ರುವ ಫೌಂಡೇಶನ್ ನ ಸ್ಥಾಪಕಧ್ಯಾಕ್ಷ ಪಟ್ಲ ಸತೀಶ್ ಕುಮಾರ್ ಶೆಟ್ಟಿ, ಮಂಕಿಸ್ಟ್ಯಾಂಡ್ ಕಟೀಲ್ದಪ್ಪೆ ಸನ್ನಿದಿಯ ಅರ್ಚಕರಾದ ಪ್ರಾಣೇಶ್, ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ವಸಂತ್ ಪೂಜಾರಿ, ಪ್ರಮುಖರಾದ ನವನೀತ್ ಕದ್ರಿ, ಕೆ.ಕೆ. ಪೇಜಾವರ್, ಪ್ರದೀಪ್ ಕುಮಾರ್ ಆಳ್ವ,, ಲೀಲಾಕ್ಷ ಕರ್ಕೇರ, ಉದ್ಯಮಿಗಳಾದ ಎಂ. ಅಶೋಕ್ ಶೇಟ್, ನವೀನ್ ಕುಮಾರ್, ಶ್ರೀ ಕ್ಷೇತ್ರದ ಸೇವಾಕರ್ತರು ಗಳಾದ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು