8:15 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಪದವಿನಂಗಡಿ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ ಪ್ರತಿಷ್ಠಾವರ್ಧಂತಿ; ಕೋಲ ಸೇವೆ ಸಂಪನ್ನ

05/12/2023, 19:52

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ನಡೆಯಿತು.
ಸಾನಿಧ್ಯದ ಯಜಮಾನ ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.


ಅಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯಕ್ಷದ್ರುವ ಫೌಂಡೇಶನ್ ನ ಸ್ಥಾಪಕಧ್ಯಾಕ್ಷ ಪಟ್ಲ ಸತೀಶ್ ಕುಮಾರ್ ಶೆಟ್ಟಿ, ಮಂಕಿಸ್ಟ್ಯಾಂಡ್ ಕಟೀಲ್ದಪ್ಪೆ ಸನ್ನಿದಿಯ ಅರ್ಚಕರಾದ ಪ್ರಾಣೇಶ್, ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ವಸಂತ್ ಪೂಜಾರಿ, ಪ್ರಮುಖರಾದ ನವನೀತ್ ಕದ್ರಿ, ಕೆ.ಕೆ. ಪೇಜಾವರ್, ಪ್ರದೀಪ್ ಕುಮಾರ್ ಆಳ್ವ,, ಲೀಲಾಕ್ಷ ಕರ್ಕೇರ, ಉದ್ಯಮಿಗಳಾದ ಎಂ. ಅಶೋಕ್ ಶೇಟ್, ನವೀನ್ ಕುಮಾರ್, ಶ್ರೀ ಕ್ಷೇತ್ರದ ಸೇವಾಕರ್ತರು ಗಳಾದ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು