5:29 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಪಡೀಲ್: ಮಂಡ್ಯಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಡಿವೈಡರ್ ಹಾರಿ ಪಲ್ಟಿ; ಚಾಲಕ, ಕ್ಲಿನರ್ ಗಾಯಗಳಿಲ್ಲದೆ ಪಾರು

27/05/2021, 15:35

ವರದಿ:ಅನುಷ್ ಪಂಡಿತ್
ಮಂಗಳೂರು(reporterkarnataka news): ನವ ಮಂಗಳೂರು ಬಂದರಿನಿಂದ ಮಂಡ್ಯ ಜಿಲ್ಲೆಯ ಮದ್ದೂರಿಗೆ uಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯೊಂದು ನಗರದ ಪಡೀಲ್ ಬಳಿ ರಸ್ತೆಯ ಡಿವೈಡರ್ ಹಾರಿ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ.


ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಈ ದುರ್ಘಟನೆ ನಡೆದಿದೆ. ಕಲ್ಲಿದ್ದಲು ತುಂಬಿದ ಲಾರಿ ಮಂಗಳೂರು ಬಂದರಿನಿಂದ ಹೊರಟು ಮಂಗಳೂರು ಹೊರವಲಯಕ್ಕೆ ತಲುಪುವ ಮುನ್ನವೇ ಪಲ್ಟಿ ಹೊಡೆದಿದೆ. ವಾಹನದ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ತಿಳಿದು ಬಂದಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ರಸ್ತೆಯಲ್ಲಿ ಕಲ್ಲಿದ್ದಲು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ರಸ್ತೆಯ ಇನ್ನೊಂದು ಕಡೆಯಿಂದ ಯಾವುದೇ ವಾಹನ ಇಲ್ಲದಿರುವುದರಿಂದ ದೊಡ್ಡ ಅನಾಹುತ ನಡೆಯುವುದು ತಪ್ಪಿದೆ. ಮಂಗಳೂರು ಕಂಕನಾಡಿ ಟ್ರಾಫಿಕ್ ಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು