3:40 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಪಡೀಲ್: ಮಂಡ್ಯಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಡಿವೈಡರ್ ಹಾರಿ ಪಲ್ಟಿ; ಚಾಲಕ, ಕ್ಲಿನರ್ ಗಾಯಗಳಿಲ್ಲದೆ ಪಾರು

27/05/2021, 15:35

ವರದಿ:ಅನುಷ್ ಪಂಡಿತ್
ಮಂಗಳೂರು(reporterkarnataka news): ನವ ಮಂಗಳೂರು ಬಂದರಿನಿಂದ ಮಂಡ್ಯ ಜಿಲ್ಲೆಯ ಮದ್ದೂರಿಗೆ uಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯೊಂದು ನಗರದ ಪಡೀಲ್ ಬಳಿ ರಸ್ತೆಯ ಡಿವೈಡರ್ ಹಾರಿ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ.


ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಈ ದುರ್ಘಟನೆ ನಡೆದಿದೆ. ಕಲ್ಲಿದ್ದಲು ತುಂಬಿದ ಲಾರಿ ಮಂಗಳೂರು ಬಂದರಿನಿಂದ ಹೊರಟು ಮಂಗಳೂರು ಹೊರವಲಯಕ್ಕೆ ತಲುಪುವ ಮುನ್ನವೇ ಪಲ್ಟಿ ಹೊಡೆದಿದೆ. ವಾಹನದ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ತಿಳಿದು ಬಂದಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ರಸ್ತೆಯಲ್ಲಿ ಕಲ್ಲಿದ್ದಲು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ರಸ್ತೆಯ ಇನ್ನೊಂದು ಕಡೆಯಿಂದ ಯಾವುದೇ ವಾಹನ ಇಲ್ಲದಿರುವುದರಿಂದ ದೊಡ್ಡ ಅನಾಹುತ ನಡೆಯುವುದು ತಪ್ಪಿದೆ. ಮಂಗಳೂರು ಕಂಕನಾಡಿ ಟ್ರಾಫಿಕ್ ಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು