2:41 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಪಡೀಲ್: ಮಂಡ್ಯಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಡಿವೈಡರ್ ಹಾರಿ ಪಲ್ಟಿ; ಚಾಲಕ, ಕ್ಲಿನರ್ ಗಾಯಗಳಿಲ್ಲದೆ ಪಾರು

27/05/2021, 15:35

ವರದಿ:ಅನುಷ್ ಪಂಡಿತ್
ಮಂಗಳೂರು(reporterkarnataka news): ನವ ಮಂಗಳೂರು ಬಂದರಿನಿಂದ ಮಂಡ್ಯ ಜಿಲ್ಲೆಯ ಮದ್ದೂರಿಗೆ uಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯೊಂದು ನಗರದ ಪಡೀಲ್ ಬಳಿ ರಸ್ತೆಯ ಡಿವೈಡರ್ ಹಾರಿ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ.


ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಈ ದುರ್ಘಟನೆ ನಡೆದಿದೆ. ಕಲ್ಲಿದ್ದಲು ತುಂಬಿದ ಲಾರಿ ಮಂಗಳೂರು ಬಂದರಿನಿಂದ ಹೊರಟು ಮಂಗಳೂರು ಹೊರವಲಯಕ್ಕೆ ತಲುಪುವ ಮುನ್ನವೇ ಪಲ್ಟಿ ಹೊಡೆದಿದೆ. ವಾಹನದ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ತಿಳಿದು ಬಂದಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ರಸ್ತೆಯಲ್ಲಿ ಕಲ್ಲಿದ್ದಲು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ರಸ್ತೆಯ ಇನ್ನೊಂದು ಕಡೆಯಿಂದ ಯಾವುದೇ ವಾಹನ ಇಲ್ಲದಿರುವುದರಿಂದ ದೊಡ್ಡ ಅನಾಹುತ ನಡೆಯುವುದು ತಪ್ಪಿದೆ. ಮಂಗಳೂರು ಕಂಕನಾಡಿ ಟ್ರಾಫಿಕ್ ಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು