12:14 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು: ಸವಾರ ಮೃತ್ಯು

20/05/2024, 21:36

ಮಂಗಳೂರು(reporterkarnataka.com): ನಗರದ ಹೊರವಲಯದ ಪಡೀಲ್ ಸಮೀಪದ ಫಸ್ಟ್ ನ್ಯುರೋ ಆಸ್ಪತ್ರೆ ಸಮೀಪ ಬೈಕೊಂದಕ್ಕೆ ಡಸ್ಟರ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ನಡೆದಿದೆ.

ಸೋಮವಾರ ಮಧ್ಯಾಹ್ನ ಸುಮಾರು 13.10 ಗಂಟೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73 ರಸ್ತೆಯಲ್ಲಿ ಬಿ. ಸಿ. ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಡಸ್ಟರ್ ಕಾರು ಬೈಕಿಗೆ ಡಿಕ್ಕಿ ಹೊಡೆದು ಸುಮಾರು ದೂರ ಎಳೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಹರೀಶ್(46)ಎಂಬವರು ಮೃತಪಟ್ಟಿದ್ದಾರೆ. ಕಾರಿನ ಚಾಲಕಿ ಅನಿತಾ ಅವರು ದುಡುಕುತನ ಮತ್ತು ನಿರ್ಲಕ್ಷ ತನದಿಂದ ಕಾರು ಚಲಾಯಿಸಿಕೊಂಡು ಬಂದು ಫಸ್ಟ್ ನ್ಯೂರೋ ಆಸ್ಪತ್ರೆ ಸಮೀಪ ರಸ್ತೆಯ ತೀರ ಎಡ ಬದಿಯಲ್ಲಿ ಚಲಾಯಿಸಿಕೊಂಡು ಹೋಗಿ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಅದರ ಸವಾರ ಹರೀಶ್ ಮತ್ತು ಬೈಕ್ ನೊಂದಿಗೆ ಸುಮಾರು ದೂರ ರಸ್ತೆಯ ಎಡ ಬದಿಯಲ್ಲಿ ಎಳೆದೊಯ್ದಿತ್ತು.
ಅಪಘಾತದಲ್ಲಿ ಹರೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಲ್ಲಿಯ ವೈದ್ಯರು ಗಾಯಾಳು ಹರೀಶ್ ಅವರು ಅದಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು