7:08 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು