4:26 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು