9:10 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು