12:15 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು