6:53 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಪಡುಬಿದ್ರಿ: ಜೂನ್ 23ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

21/06/2024, 19:04

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕದ ಜಂಟಿ ಸಹಯೋಗದೊಂದಿಗೆ ಜೂನ್ 23ರಂದು ಪೂರ್ವಾಹ್ನ 9.33ರಿಂದ ಅಪರಾಹ್ನ 12.30ರವರೆಗೆ ಪಡುಬಿದ್ರಿಯ
ಕರ್ನಾಟಕ ಪಬ್ಲಿಕ್ ಶಾಲೆ (ಬೋರ್ಡ್ ಶಾಲೆ)ಯಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ ,ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಬಿಪಿ ಮತ್ತು ಮಧುಮೇಹ ತಪಾಸಣೆ, ಸಾಮಾನ್ಯ ರೋಗ ತಪಾಸಣೆ, ಉಚಿತ ಔಷಧಿ ವಿತರಣೆ, ರಕ್ತ ಗುಂಪಿನ ವರ್ಗಿಕರಣ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು