4:57 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಡುಬಿದ್ರೆಯಲ್ಲಿ ಕೊಲೆ ಮಾಡಿ ದೇವರಮನೆ ಬಳಿ ಶವ ಎಸೆದ ಪ್ರಕರಣ: ಮತ್ತೆ 4 ಮಂದಿ ಬಂಟ್ವಾಳದ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೇರಿಕೆ

10/07/2023, 18:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲ್ಲೂಕು ಮಂಚಿ ಗ್ರಾಮದ ದಾವೂದ್ ಅಮೀರ್(25), ಅಬ್ದುಲ್ ರಹೀಜ್(23), ಬಂಟ್ವಾಳ ತಾಲ್ಲೂಕು ಕವಾಲ ಮಡೂರು ಗ್ರಾಮದ ಆಫ್ರಿದಿ(23), ಮಹಮ್ಮದ್ ಇರ್ಷಾದ್(20) ಎಂದು ಗುರುತಿಸಲಾಗಿದೆ.

ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.
ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.
ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು