9:45 PM Friday3 - April 2026
ಬ್ರೇಕಿಂಗ್ ನ್ಯೂಸ್
ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ…

ಇತ್ತೀಚಿನ ಸುದ್ದಿ

ಪದುವಾ ಕಾಲೇಜಿನಲ್ಲಿ ಕುಟುಂಬ ದಿನ ಕಾರ್ಯಕ್ರಮ

21/11/2024, 20:09

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಪೋಷಕರು ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮಾತ್ರ ಶಾಲೆ ಮತ್ತು ಪೋಷಕರ ನಡುವಿನ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಎಂದು ಎ.ಜೆ. ಶೆಟ್ಟಿ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಪ್ರೊಫೆಸರ್ ಆಗಿ ಸೇವೆಸಲ್ಲಿಸುತ್ತಿರುವ ಹಾಗೂ ಬೆಂದೂರ್ ಪ್ಯಾರಿಷ್ ಪಾಸ್ಪೋರೋಲ್ ಪರಿಷದ ನ ಅಧ್ಯಕ್ಷರಾಗಿರುವ ವಿನೋದ್ ಡಿಸೋಜ ಹೇಳಿದರು.

ಪಾದುವ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಮಹೋತ್ಸವದ ಅಂಗವಾಗಿ ಕಾಲೇಜಿನ ಸಭಾಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕುಟುಂಬ ದಿನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಕಾಲೇಜಿನಲ್ಲಿ ಪೋಷಕರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ನಡೆಸುತ್ತಿರುವುದನ್ನು ನೋಡುವಾಗ ಕುಟುಂಬದ ಒಂದು ಕಾರ್ಯಕ್ರಮದಂತೆ ಕಾಣುತ್ತಿದೆ ಎಂದರು.
ಕಾಲೇಜಿನ ಆವರಣ ನಿರ್ದೇಶಕ ಫಾದರ್ ಅರುಣ್ ವಿಲ್ಸನ್ ಲೋಬೊ ರವರು ಮಾತನಾಡಿದರು.
ಪದುವಾ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಫಾದರ್ ವಾಲ್ಟರ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ಹಲವು ಆಟೋಟ ಸ್ಪರ್ಧೆ ನಡೆಸಲಾಯಿತು. ಪೋಷಕರು ಮತ್ತು ಉಪನ್ಯಾಸಕರಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ
ಮಾರಿಯಟ್ ಮಸ್ಕರೇನ್ಹಸ್ ಅವರು ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು.
ವೇದಿಕೆಯಲ್ಲಿ ಉಪನ್ಯಾಸಕರಾದ ಡಾ. ರಾಮ್ ಪ್ರಸಾದ್, ಪೋಷಕರಾದ ನಿತಾಶ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಿಯು ಕಾಲೇಜಿನ ಉಪನ್ಯಾಸಕರು ಸಂಯೋಜಿಸಿದರು.
ವಿದ್ಯಾರ್ಥಿಗಳ ಪೋಷಕರು ಪ್ರಾರ್ಥಿಸಿದರು. ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾರಿಯಟ್ ಮಸ್ಕರೇನ್ಹಸ್ ಸ್ವಾಗತಿಸಿದರು. ಧರಣೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು