6:36 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್

ಇತ್ತೀಚಿನ ಸುದ್ದಿ

ಪದುವಾ ಕಾಲೇಜಿನಲ್ಲಿ ಕುಟುಂಬ ದಿನ ಕಾರ್ಯಕ್ರಮ

21/11/2024, 20:09

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಪೋಷಕರು ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮಾತ್ರ ಶಾಲೆ ಮತ್ತು ಪೋಷಕರ ನಡುವಿನ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಎಂದು ಎ.ಜೆ. ಶೆಟ್ಟಿ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಪ್ರೊಫೆಸರ್ ಆಗಿ ಸೇವೆಸಲ್ಲಿಸುತ್ತಿರುವ ಹಾಗೂ ಬೆಂದೂರ್ ಪ್ಯಾರಿಷ್ ಪಾಸ್ಪೋರೋಲ್ ಪರಿಷದ ನ ಅಧ್ಯಕ್ಷರಾಗಿರುವ ವಿನೋದ್ ಡಿಸೋಜ ಹೇಳಿದರು.

ಪಾದುವ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಮಹೋತ್ಸವದ ಅಂಗವಾಗಿ ಕಾಲೇಜಿನ ಸಭಾಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕುಟುಂಬ ದಿನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಕಾಲೇಜಿನಲ್ಲಿ ಪೋಷಕರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ನಡೆಸುತ್ತಿರುವುದನ್ನು ನೋಡುವಾಗ ಕುಟುಂಬದ ಒಂದು ಕಾರ್ಯಕ್ರಮದಂತೆ ಕಾಣುತ್ತಿದೆ ಎಂದರು.
ಕಾಲೇಜಿನ ಆವರಣ ನಿರ್ದೇಶಕ ಫಾದರ್ ಅರುಣ್ ವಿಲ್ಸನ್ ಲೋಬೊ ರವರು ಮಾತನಾಡಿದರು.
ಪದುವಾ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಫಾದರ್ ವಾಲ್ಟರ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ಹಲವು ಆಟೋಟ ಸ್ಪರ್ಧೆ ನಡೆಸಲಾಯಿತು. ಪೋಷಕರು ಮತ್ತು ಉಪನ್ಯಾಸಕರಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ
ಮಾರಿಯಟ್ ಮಸ್ಕರೇನ್ಹಸ್ ಅವರು ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು.
ವೇದಿಕೆಯಲ್ಲಿ ಉಪನ್ಯಾಸಕರಾದ ಡಾ. ರಾಮ್ ಪ್ರಸಾದ್, ಪೋಷಕರಾದ ನಿತಾಶ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಿಯು ಕಾಲೇಜಿನ ಉಪನ್ಯಾಸಕರು ಸಂಯೋಜಿಸಿದರು.
ವಿದ್ಯಾರ್ಥಿಗಳ ಪೋಷಕರು ಪ್ರಾರ್ಥಿಸಿದರು. ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾರಿಯಟ್ ಮಸ್ಕರೇನ್ಹಸ್ ಸ್ವಾಗತಿಸಿದರು. ಧರಣೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು