9:39 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ

28/05/2021, 16:41

ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ಸಲಹೆಗಾರ ಅಂಕಿತ್ ಸುವರ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಇಂದಿನ ಮಹಾಮಾರಿಯಂತಹ  ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ವಿಚಲಿತವಾಗದಂತೆ ಅವರನ್ನು ಶೈಕ್ಷಣಿಕ ಚಟುವಟಿಕೆಗಳತ್ತ ಸೆಳೆಯುವ ನಿಟ್ಟಿನಲ್ಲಿ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ರೆ. ಫಾ. ಆಲ್ವಿನ್ ಸೆರಾವೊ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಈ ಕಠಿಣ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಕರೆಯಿಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ ಆರೋಗ್ಯವಂತ ಮನಸ್ಸು ಪರಿಪೂರ್ಣ ಬೆಳವಣಿಗೆಯ ಮೂಲ ಮಂತ್ರ, ಇನ್ನೊಬ್ಬರ ಭಾವನೆಗಳಿಗೆ ಸ್ಪಂದನೆ,ಧನಾತ್ಮಕ ಚಿಂತನೆ,ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಕೋವಿಡ್ ನ ಆತಂಕದ ದಿನಗಳ ಒತ್ತಡದಿಂದ ಪಾರಾಗಬಹುದು. ಎಂದು ತಿಳಿಸಿದರು.




ಪದುವ ಕಾಲೇಜಿನ ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಶನ್ ಸಾಂತುಮಯೋರ್ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದರು.
ಸಹ ಯೋಜನಾಧಿಕಾರಿ ರೇಷ್ಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕ ಅಕ್ಷಯ್ ವಂದಿಸಿದರು.
ಕಾಲೇಜಿನ ಪ್ರಾಧ್ಯಾಪಕಿ ಜೆಸ್ಫ್ರಿಡಾ ಮಿನೆಜಸ್ ತಾಂತ್ರಿಕ ನೆರವು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು