1:15 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ

28/05/2021, 16:41

ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ಸಲಹೆಗಾರ ಅಂಕಿತ್ ಸುವರ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಇಂದಿನ ಮಹಾಮಾರಿಯಂತಹ  ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ವಿಚಲಿತವಾಗದಂತೆ ಅವರನ್ನು ಶೈಕ್ಷಣಿಕ ಚಟುವಟಿಕೆಗಳತ್ತ ಸೆಳೆಯುವ ನಿಟ್ಟಿನಲ್ಲಿ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ರೆ. ಫಾ. ಆಲ್ವಿನ್ ಸೆರಾವೊ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಈ ಕಠಿಣ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಕರೆಯಿಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ ಆರೋಗ್ಯವಂತ ಮನಸ್ಸು ಪರಿಪೂರ್ಣ ಬೆಳವಣಿಗೆಯ ಮೂಲ ಮಂತ್ರ, ಇನ್ನೊಬ್ಬರ ಭಾವನೆಗಳಿಗೆ ಸ್ಪಂದನೆ,ಧನಾತ್ಮಕ ಚಿಂತನೆ,ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಕೋವಿಡ್ ನ ಆತಂಕದ ದಿನಗಳ ಒತ್ತಡದಿಂದ ಪಾರಾಗಬಹುದು. ಎಂದು ತಿಳಿಸಿದರು.




ಪದುವ ಕಾಲೇಜಿನ ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಶನ್ ಸಾಂತುಮಯೋರ್ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದರು.
ಸಹ ಯೋಜನಾಧಿಕಾರಿ ರೇಷ್ಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕ ಅಕ್ಷಯ್ ವಂದಿಸಿದರು.
ಕಾಲೇಜಿನ ಪ್ರಾಧ್ಯಾಪಕಿ ಜೆಸ್ಫ್ರಿಡಾ ಮಿನೆಜಸ್ ತಾಂತ್ರಿಕ ನೆರವು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು