4:46 AM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ

28/05/2021, 16:41

ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ಸಲಹೆಗಾರ ಅಂಕಿತ್ ಸುವರ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಇಂದಿನ ಮಹಾಮಾರಿಯಂತಹ  ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ವಿಚಲಿತವಾಗದಂತೆ ಅವರನ್ನು ಶೈಕ್ಷಣಿಕ ಚಟುವಟಿಕೆಗಳತ್ತ ಸೆಳೆಯುವ ನಿಟ್ಟಿನಲ್ಲಿ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ರೆ. ಫಾ. ಆಲ್ವಿನ್ ಸೆರಾವೊ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಈ ಕಠಿಣ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಕರೆಯಿಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ ಆರೋಗ್ಯವಂತ ಮನಸ್ಸು ಪರಿಪೂರ್ಣ ಬೆಳವಣಿಗೆಯ ಮೂಲ ಮಂತ್ರ, ಇನ್ನೊಬ್ಬರ ಭಾವನೆಗಳಿಗೆ ಸ್ಪಂದನೆ,ಧನಾತ್ಮಕ ಚಿಂತನೆ,ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಕೋವಿಡ್ ನ ಆತಂಕದ ದಿನಗಳ ಒತ್ತಡದಿಂದ ಪಾರಾಗಬಹುದು. ಎಂದು ತಿಳಿಸಿದರು.




ಪದುವ ಕಾಲೇಜಿನ ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಶನ್ ಸಾಂತುಮಯೋರ್ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದರು.
ಸಹ ಯೋಜನಾಧಿಕಾರಿ ರೇಷ್ಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕ ಅಕ್ಷಯ್ ವಂದಿಸಿದರು.
ಕಾಲೇಜಿನ ಪ್ರಾಧ್ಯಾಪಕಿ ಜೆಸ್ಫ್ರಿಡಾ ಮಿನೆಜಸ್ ತಾಂತ್ರಿಕ ನೆರವು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು