7:02 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ

12/01/2022, 22:39

ಮಂಗಳೂರು (ReporterKarnataka.com)

ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್‌ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಕರಾವಳಿಯ ಅನೇಕರು ಕವನವನ್ನು ಬರೆಯುತ್ತಿದ್ದಾರೆ, ಕೇವಲ ಕವನಗಳಿಗೆ ಸೀಮಿತರಾಗಬಾರದು ಪದ್ಯಗಳ ಜತೆಗೆ ಗದ್ಯ ರಚನೆಯನ್ನೂ ರೂಢಿಸಿಕೊಳ್ಳಬೇಕು, ಪದ್ಯವನ್ನು ಬರೆದಾಗ ಅದನ್ನು ಹಾಡಿದಾಗ ಅವುಗಳಿಗೆ ಲೈಕು ಬಂದಾಗ ಬರಿ ಅದಕಷ್ಟೆ ಮಾರು ಹೋಗಬೇಡಿ ಎಂದು ಕಿವಿ ಮಾತು ಹೇಳಿದರು.
ಜತೆಗೆ ಅಧ್ಯಯನ ಕೂಡ ಉತ್ತಮ ಕ್ಷೇತ್ರವಾಗಿದ್ದು ಯುವ ಜನತೆ ಇದರ ಬಗ್ಗೆ ಗಮನ ಹರಿಸಬೇಕು ಸಂಶೋಧನೆಗೆ ಯಾವುದೆ ಪದವಿ ಪಿಎಚ್‌ಡಿ ಮುಖ್ಯವಲ್ಲ ಸುತ್ತಮುತ್ತಲಿನ ಕೇಂದ್ರಗಳ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ ಬರೆದು ಅಧ್ಯಯನ ಮಾಡಬಹುದು ಎಂದರು.

ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆಯವರಿಗೆ ತೌಳವ ಸಿರಿ ಪ್ರಶಸ್ತಿ, ಸ್ನೇಹದೀಪದ ಸಂಚಾಲಕಿ ತಬಸ್ಸುಮ್ ಅವರಿಗೆ ಸಾರಾ ದತ್ತಿ ಪ್ರಶಸ್ತಿ ಹಾಗೂ ನಿರ್ಮಲಾ ಸುರತ್ಕಲ್ ಅವರಿಗೆ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಪ್ರದಾನ ಮಾಡಲಾಯಿತು.

ಪಾದುವಾ ಪದವಿಪೂರ್ವ ಕಾಲೇಜ್ ಪ್ರಾಂಶುಪಾಲರಾದ ಗ್ಲಾಡಿಸ್ ಅಲೋಸಿಯಸ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕರಾದ ಡಾ.ಸಕೀನಾ ನಾಸೆರ್ ಉಪಸ್ಥಿತರಿದ್ದರು. ಹಿರಿಯ ಲೇಖಕಿ ರೂಪಕಲಾ ಆಳ್ವ ತೀರ್ಪುಗಾರರ ಅನಿಸಿಕೆಯನ್ನು ಹಂಚಿಕೊಂಡರು.

ಡಾ.ಜ್ಯೋತಿ ಚೇಳ್ಯಾರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸಂಘದ ಉಪಾಧ್ಯಕ್ಷರಾದ ವಿಜಯಲಕ್ಷ್ಮೀ ಬಿ.ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ.ಪ್ರವೀಣ ರೈ ಕುಕ್ಕುವಳ್ಳಿ ನಿರೂಪಿಸಿದರು. ಸಂಘದ ಕೋಶಾಧಿಕಾರಿ ಶರ್ಮಿಳಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು