1:29 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ

12/01/2022, 22:39

ಮಂಗಳೂರು (ReporterKarnataka.com)

ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್‌ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಕರಾವಳಿಯ ಅನೇಕರು ಕವನವನ್ನು ಬರೆಯುತ್ತಿದ್ದಾರೆ, ಕೇವಲ ಕವನಗಳಿಗೆ ಸೀಮಿತರಾಗಬಾರದು ಪದ್ಯಗಳ ಜತೆಗೆ ಗದ್ಯ ರಚನೆಯನ್ನೂ ರೂಢಿಸಿಕೊಳ್ಳಬೇಕು, ಪದ್ಯವನ್ನು ಬರೆದಾಗ ಅದನ್ನು ಹಾಡಿದಾಗ ಅವುಗಳಿಗೆ ಲೈಕು ಬಂದಾಗ ಬರಿ ಅದಕಷ್ಟೆ ಮಾರು ಹೋಗಬೇಡಿ ಎಂದು ಕಿವಿ ಮಾತು ಹೇಳಿದರು.
ಜತೆಗೆ ಅಧ್ಯಯನ ಕೂಡ ಉತ್ತಮ ಕ್ಷೇತ್ರವಾಗಿದ್ದು ಯುವ ಜನತೆ ಇದರ ಬಗ್ಗೆ ಗಮನ ಹರಿಸಬೇಕು ಸಂಶೋಧನೆಗೆ ಯಾವುದೆ ಪದವಿ ಪಿಎಚ್‌ಡಿ ಮುಖ್ಯವಲ್ಲ ಸುತ್ತಮುತ್ತಲಿನ ಕೇಂದ್ರಗಳ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ ಬರೆದು ಅಧ್ಯಯನ ಮಾಡಬಹುದು ಎಂದರು.

ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆಯವರಿಗೆ ತೌಳವ ಸಿರಿ ಪ್ರಶಸ್ತಿ, ಸ್ನೇಹದೀಪದ ಸಂಚಾಲಕಿ ತಬಸ್ಸುಮ್ ಅವರಿಗೆ ಸಾರಾ ದತ್ತಿ ಪ್ರಶಸ್ತಿ ಹಾಗೂ ನಿರ್ಮಲಾ ಸುರತ್ಕಲ್ ಅವರಿಗೆ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಪ್ರದಾನ ಮಾಡಲಾಯಿತು.

ಪಾದುವಾ ಪದವಿಪೂರ್ವ ಕಾಲೇಜ್ ಪ್ರಾಂಶುಪಾಲರಾದ ಗ್ಲಾಡಿಸ್ ಅಲೋಸಿಯಸ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕರಾದ ಡಾ.ಸಕೀನಾ ನಾಸೆರ್ ಉಪಸ್ಥಿತರಿದ್ದರು. ಹಿರಿಯ ಲೇಖಕಿ ರೂಪಕಲಾ ಆಳ್ವ ತೀರ್ಪುಗಾರರ ಅನಿಸಿಕೆಯನ್ನು ಹಂಚಿಕೊಂಡರು.

ಡಾ.ಜ್ಯೋತಿ ಚೇಳ್ಯಾರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸಂಘದ ಉಪಾಧ್ಯಕ್ಷರಾದ ವಿಜಯಲಕ್ಷ್ಮೀ ಬಿ.ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ.ಪ್ರವೀಣ ರೈ ಕುಕ್ಕುವಳ್ಳಿ ನಿರೂಪಿಸಿದರು. ಸಂಘದ ಕೋಶಾಧಿಕಾರಿ ಶರ್ಮಿಳಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು