9:14 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ

12/01/2022, 22:39

ಮಂಗಳೂರು (ReporterKarnataka.com)

ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್‌ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಕರಾವಳಿಯ ಅನೇಕರು ಕವನವನ್ನು ಬರೆಯುತ್ತಿದ್ದಾರೆ, ಕೇವಲ ಕವನಗಳಿಗೆ ಸೀಮಿತರಾಗಬಾರದು ಪದ್ಯಗಳ ಜತೆಗೆ ಗದ್ಯ ರಚನೆಯನ್ನೂ ರೂಢಿಸಿಕೊಳ್ಳಬೇಕು, ಪದ್ಯವನ್ನು ಬರೆದಾಗ ಅದನ್ನು ಹಾಡಿದಾಗ ಅವುಗಳಿಗೆ ಲೈಕು ಬಂದಾಗ ಬರಿ ಅದಕಷ್ಟೆ ಮಾರು ಹೋಗಬೇಡಿ ಎಂದು ಕಿವಿ ಮಾತು ಹೇಳಿದರು.
ಜತೆಗೆ ಅಧ್ಯಯನ ಕೂಡ ಉತ್ತಮ ಕ್ಷೇತ್ರವಾಗಿದ್ದು ಯುವ ಜನತೆ ಇದರ ಬಗ್ಗೆ ಗಮನ ಹರಿಸಬೇಕು ಸಂಶೋಧನೆಗೆ ಯಾವುದೆ ಪದವಿ ಪಿಎಚ್‌ಡಿ ಮುಖ್ಯವಲ್ಲ ಸುತ್ತಮುತ್ತಲಿನ ಕೇಂದ್ರಗಳ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ ಬರೆದು ಅಧ್ಯಯನ ಮಾಡಬಹುದು ಎಂದರು.

ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆಯವರಿಗೆ ತೌಳವ ಸಿರಿ ಪ್ರಶಸ್ತಿ, ಸ್ನೇಹದೀಪದ ಸಂಚಾಲಕಿ ತಬಸ್ಸುಮ್ ಅವರಿಗೆ ಸಾರಾ ದತ್ತಿ ಪ್ರಶಸ್ತಿ ಹಾಗೂ ನಿರ್ಮಲಾ ಸುರತ್ಕಲ್ ಅವರಿಗೆ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಪ್ರದಾನ ಮಾಡಲಾಯಿತು.

ಪಾದುವಾ ಪದವಿಪೂರ್ವ ಕಾಲೇಜ್ ಪ್ರಾಂಶುಪಾಲರಾದ ಗ್ಲಾಡಿಸ್ ಅಲೋಸಿಯಸ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕರಾದ ಡಾ.ಸಕೀನಾ ನಾಸೆರ್ ಉಪಸ್ಥಿತರಿದ್ದರು. ಹಿರಿಯ ಲೇಖಕಿ ರೂಪಕಲಾ ಆಳ್ವ ತೀರ್ಪುಗಾರರ ಅನಿಸಿಕೆಯನ್ನು ಹಂಚಿಕೊಂಡರು.

ಡಾ.ಜ್ಯೋತಿ ಚೇಳ್ಯಾರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸಂಘದ ಉಪಾಧ್ಯಕ್ಷರಾದ ವಿಜಯಲಕ್ಷ್ಮೀ ಬಿ.ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ.ಪ್ರವೀಣ ರೈ ಕುಕ್ಕುವಳ್ಳಿ ನಿರೂಪಿಸಿದರು. ಸಂಘದ ಕೋಶಾಧಿಕಾರಿ ಶರ್ಮಿಳಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು