4:13 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪೆಗಾಸಸ್‌ ಬೇಹುಗಾರಿಕೆ ವಿವಾದ: ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್‌

21/05/2022, 10:05

ಹೊಸದಿಲ್ಲಿ(reporterkarnataka.com): ವಿವಿಐಪಿಗಳ ಬೇಹುಗಾರಿಕೆ ಸಂಬಂಧಿಸಿದ ಪೆಗಾಸಸ್‌ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್‌ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. 

ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲು ಪೆಗಾಗಸಸ್‌ ಸಾಫ್ಟ್‌ ವೇರ್‌ ಬಳಕೆಯಾಗಿರುವ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ರವೀಂದ್ರನ್‌ ಅವರ ನೇತೃತ್ವದಲ್ಲಿ 2021 ಅಕ್ಟೋಬರ್‌ ನಲ್ಲಿ ಸಮಿತಿಯೊಂದನ್ನು ರಚಿಸಿ ತನಿಖೆಗೆ ಅದೇಶ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ʼಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಾಧನಗಳನ್ನು ಪರೀಕ್ಷಿಸಲು ಸಮಿತಿಯು ತನ್ನದೇ ಆದ ಸಾಫ್ಟ್‌ ವೇರ್‌ ಅಭಿವೃದ್ಧಿ ಪಡಿಸಿದೆ, ಈ ಸಂಬಂಧ ವಿವಿಧ ಸರ್ಕಾರಿ ಏಜನ್ಸಿಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದ್ಧಾರೆ. ಇನ್ನು ಈ ಕುರಿತು ತಾಂತ್ರಿಕ ಸಮಿತಿಯು ಪೆಗಾಸಸ್‌ ಸಾಧನಗಳ ಪರಿಶೀಲನೆಗೆ ಸ್ಟಾಂಡರ್ಡ್‌ ಆಪರೇಟಿಂಗ್‌ ವಿಧಾನಗಳನ್ನು ಅಂತಿಮಗೊಳಿಸಲಾಗುತ್ತಿದ್ದು ಮೇ ಅಂತ್ಯದ ವೇಳೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು