2:42 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಪೆಗಾಸಸ್‌ ಬೇಹುಗಾರಿಕೆ ವಿವಾದ: ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್‌

21/05/2022, 10:05

ಹೊಸದಿಲ್ಲಿ(reporterkarnataka.com): ವಿವಿಐಪಿಗಳ ಬೇಹುಗಾರಿಕೆ ಸಂಬಂಧಿಸಿದ ಪೆಗಾಸಸ್‌ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್‌ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. 

ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲು ಪೆಗಾಗಸಸ್‌ ಸಾಫ್ಟ್‌ ವೇರ್‌ ಬಳಕೆಯಾಗಿರುವ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ರವೀಂದ್ರನ್‌ ಅವರ ನೇತೃತ್ವದಲ್ಲಿ 2021 ಅಕ್ಟೋಬರ್‌ ನಲ್ಲಿ ಸಮಿತಿಯೊಂದನ್ನು ರಚಿಸಿ ತನಿಖೆಗೆ ಅದೇಶ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ʼಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಾಧನಗಳನ್ನು ಪರೀಕ್ಷಿಸಲು ಸಮಿತಿಯು ತನ್ನದೇ ಆದ ಸಾಫ್ಟ್‌ ವೇರ್‌ ಅಭಿವೃದ್ಧಿ ಪಡಿಸಿದೆ, ಈ ಸಂಬಂಧ ವಿವಿಧ ಸರ್ಕಾರಿ ಏಜನ್ಸಿಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದ್ಧಾರೆ. ಇನ್ನು ಈ ಕುರಿತು ತಾಂತ್ರಿಕ ಸಮಿತಿಯು ಪೆಗಾಸಸ್‌ ಸಾಧನಗಳ ಪರಿಶೀಲನೆಗೆ ಸ್ಟಾಂಡರ್ಡ್‌ ಆಪರೇಟಿಂಗ್‌ ವಿಧಾನಗಳನ್ನು ಅಂತಿಮಗೊಳಿಸಲಾಗುತ್ತಿದ್ದು ಮೇ ಅಂತ್ಯದ ವೇಳೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು