8:41 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

ಪಕ್ಕಲಡ್ಕ ಯುವಕ ಮಂಡಲ ಅಮೃತ ಮಹೋತ್ಸವ: ಏ.29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ

26/04/2023, 16:03

ಮಂಗಳೂರು(reporterkarnataka.com): ಪಕ್ಕಲಡ್ಕ ಯುವಕ ಮಂಡಲದ ಅಮೃತ ಮಹೋತ್ಸವ ಅಂಗವಾಗಿ ಏ 29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ ನಡೆಯಲಿದೆ.
ಬಜಾಲ್ ಸುತ್ತಮುತ್ತಲಿನ ಗ್ರಾಮದ ಅನಕ್ಷರಸ್ಥ ರೈತ, ಕೂಲಿ ಕಾರ್ಮಿಕರಿಗೆ ಅಕ್ಷರಭ್ಯಾಸ ನೀಡುವ ಒಂದು ಮಹತ್ತರವಾದ ಉದ್ದೇಶವನ್ನಿಟ್ಟುಕೊಂಡ ಬೆರಳೆಣಿಕೆಯ ತರುಣರು ರಾತ್ರಿ ಶಾಲೆಯನ್ನು ಪ್ರಾರಂಭ ಮಾಡುವ ಮೂಲಕ 1953ರಲ್ಲಿ ಪಕ್ಕಲಡ್ಕ ಯುವಕ ಮಂಡಲ ಸಂಸ್ಥೆಯನ್ನು ಸ್ಥಾಪಿಸಿದರು. ಹೀಗೆ ಪ್ರಾರಂಭಗೊಂಡ ಪಕ್ಕಲಡ್ಕ ಯುವಕ ಮಂಡಲವು ಕಳೆದ 70 ವರುಷಗಳಿಂದ ಸ್ಥಳೀಯ ಯುವಜನರನ್ನು ಒಗ್ಗೂಡಿಸಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸದುದ್ದೇಶಗಳನ್ನಿಟ್ಟುಕೊಂಡು ನಿರಂತರ ಜನಪರ ಕೆಲಸವನ್ನು ಮಾಡುತ್ತ ಬಂದ ಕಾರಣಕ್ಕಾಗಿ ಇವತ್ತಿಗೂ ಊರಿನ ಜನರ ಪ್ರೀತಿ ವಿಶ್ವಾಸ ಗಳಿಸಲು ಸಾಧ್ಯವಾಗಿದೆ.
ಪಕ್ಕಲಡ್ಕ ಯುವಕ ಮಂಡಲವು ಊರಿನ ಪ್ರಗತಿಗಾಗಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಧ್ವನಿಯಾಗಿ ತನ್ನ ಸೇವೆಯನ್ನು ನಿರಂತರ ನೀಡುತ್ತಾ ಬಂದಿದ್ದು ಪ್ರತಿವರುಷ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಸರಕಾರದ ವಿವಿಧ ಸವಲತ್ತುಗಳನ್ನು ಜನಸಾಮಾನ್ಯರಿಗೆ ಒದಗಿಸಿಕೊಡುವ, ಶ್ರಮದಾನ, ಕಾನೂನು ನೆರವು ಶಿಬಿರ, ಕಂದಾಯ ಶಿಬಿರ, ಸಾಕ್ಷಾರತಾ ಆಂದೋಲನ, ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳು, ಶಾಲಾ ಕ್ರೀಡಾಕೂಟ, ನಾಟಕ ತರಬೇತಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಜಾಗ್ರತಿಯ ಬೀದಿ ನಾಟಕಗಳು, ಉಚಿತ ನೃತ್ಯ ಅಭ್ಯಾಸ ಗಳು, ಕೊರೋನಾ ಕಾಲದಲ್ಲಿ ಆಹಾರ ಕಿಟ್ ಸಹಿತ , ಕೊರೋನಾ ಸೋಂಕಿತ ಮೃತದೇಹಗಳ ಅಂತಿಮ ಸಂಸ್ಕಾರದಂತಹ ಅಪಾಯಕಾರಿ ಕೆಲಸಗಳಲ್ಲೂ ತೊಡಗಿಸಿಕೊಳ್ಳುವ ಜನಮನ್ನಣೆಯನ್ನು ಗಳಿಸಿದೆ.
ಈ ಬಾರಿ 70ನೇ ವರುಷದ ಅಮೃತಮಹೋತ್ಸವದ ನೆನಪಿನಲ್ಲಿ ಇನ್ನಷ್ಟು ಜನಪರ ಕೆಲಸಗಳನ್ನು ಕೈಗೊಳ್ಳುವ ಉದ್ದೇಶದಿಂದ ಸ್ಥಳೀಯ ಆರ್ಥಿಕವಾಗಿ ಹಿಂದುಳಿದ ಅಸಹಾಯಕ ರೋಗಿಗಳನ್ನು ಕೊಂಡೊಯ್ಯಲು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸುವ ಮಹತ್ವಪೂರ್ಣ ಯೋಜನೆಯನ್ನು ಕೈಗೊಂಡಿದೆ. ಇದೇ ಬರುವ ತಾರೀಕು ಎಪ್ರೀಲ್ 29 ರಂದು ಪಕ್ಕಲಡ್ಕ ಯುವಕ ಮಂಡಲದ ಮೈದಾನದಲ್ಲಿ ಬಹಿರಂಗ ವಾರ್ಷಿಕೋತ್ಸವ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳ್ಳಲಿದೆ. ಇದೇ ವೇಳೆ ಪಿವೈಎಮ್ ಡಾನ್ಸ್ ತರಬೇತಿ ಕೇಂದ್ರ, ಯುವಕ ಮಂಡಲದ ಮಾಜಿ ನಾಯಕ ಕೊರಗಪ್ಪ ಕೊಟ್ಟಾರಿ ಸ್ಮರಣಾರ್ಥ ಗ್ರಂಥಾಲಯ ಉದ್ಘಾಟನೆಗೊಳ್ಳಲಿದೆ ಎಂದು ಪಕ್ಕಲಡ್ಕ ಯುವಕ ಮಂಡಲದ ಅಧ್ಯಕ್ಷರಾದ ದೀಪಕ್ ಬಜಾಲ್, ಕಾರ್ಯದರ್ಶಿ ಪ್ರೀತೇಶ್ ತಲವಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು