2:52 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪಕ್ಕಲಡ್ಕ ಯುವಕ ಮಂಡಲ ಅಮೃತ ಮಹೋತ್ಸವ: ಏ.29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ

26/04/2023, 16:03

ಮಂಗಳೂರು(reporterkarnataka.com): ಪಕ್ಕಲಡ್ಕ ಯುವಕ ಮಂಡಲದ ಅಮೃತ ಮಹೋತ್ಸವ ಅಂಗವಾಗಿ ಏ 29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ ನಡೆಯಲಿದೆ.
ಬಜಾಲ್ ಸುತ್ತಮುತ್ತಲಿನ ಗ್ರಾಮದ ಅನಕ್ಷರಸ್ಥ ರೈತ, ಕೂಲಿ ಕಾರ್ಮಿಕರಿಗೆ ಅಕ್ಷರಭ್ಯಾಸ ನೀಡುವ ಒಂದು ಮಹತ್ತರವಾದ ಉದ್ದೇಶವನ್ನಿಟ್ಟುಕೊಂಡ ಬೆರಳೆಣಿಕೆಯ ತರುಣರು ರಾತ್ರಿ ಶಾಲೆಯನ್ನು ಪ್ರಾರಂಭ ಮಾಡುವ ಮೂಲಕ 1953ರಲ್ಲಿ ಪಕ್ಕಲಡ್ಕ ಯುವಕ ಮಂಡಲ ಸಂಸ್ಥೆಯನ್ನು ಸ್ಥಾಪಿಸಿದರು. ಹೀಗೆ ಪ್ರಾರಂಭಗೊಂಡ ಪಕ್ಕಲಡ್ಕ ಯುವಕ ಮಂಡಲವು ಕಳೆದ 70 ವರುಷಗಳಿಂದ ಸ್ಥಳೀಯ ಯುವಜನರನ್ನು ಒಗ್ಗೂಡಿಸಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸದುದ್ದೇಶಗಳನ್ನಿಟ್ಟುಕೊಂಡು ನಿರಂತರ ಜನಪರ ಕೆಲಸವನ್ನು ಮಾಡುತ್ತ ಬಂದ ಕಾರಣಕ್ಕಾಗಿ ಇವತ್ತಿಗೂ ಊರಿನ ಜನರ ಪ್ರೀತಿ ವಿಶ್ವಾಸ ಗಳಿಸಲು ಸಾಧ್ಯವಾಗಿದೆ.
ಪಕ್ಕಲಡ್ಕ ಯುವಕ ಮಂಡಲವು ಊರಿನ ಪ್ರಗತಿಗಾಗಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಧ್ವನಿಯಾಗಿ ತನ್ನ ಸೇವೆಯನ್ನು ನಿರಂತರ ನೀಡುತ್ತಾ ಬಂದಿದ್ದು ಪ್ರತಿವರುಷ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಸರಕಾರದ ವಿವಿಧ ಸವಲತ್ತುಗಳನ್ನು ಜನಸಾಮಾನ್ಯರಿಗೆ ಒದಗಿಸಿಕೊಡುವ, ಶ್ರಮದಾನ, ಕಾನೂನು ನೆರವು ಶಿಬಿರ, ಕಂದಾಯ ಶಿಬಿರ, ಸಾಕ್ಷಾರತಾ ಆಂದೋಲನ, ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳು, ಶಾಲಾ ಕ್ರೀಡಾಕೂಟ, ನಾಟಕ ತರಬೇತಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಜಾಗ್ರತಿಯ ಬೀದಿ ನಾಟಕಗಳು, ಉಚಿತ ನೃತ್ಯ ಅಭ್ಯಾಸ ಗಳು, ಕೊರೋನಾ ಕಾಲದಲ್ಲಿ ಆಹಾರ ಕಿಟ್ ಸಹಿತ , ಕೊರೋನಾ ಸೋಂಕಿತ ಮೃತದೇಹಗಳ ಅಂತಿಮ ಸಂಸ್ಕಾರದಂತಹ ಅಪಾಯಕಾರಿ ಕೆಲಸಗಳಲ್ಲೂ ತೊಡಗಿಸಿಕೊಳ್ಳುವ ಜನಮನ್ನಣೆಯನ್ನು ಗಳಿಸಿದೆ.
ಈ ಬಾರಿ 70ನೇ ವರುಷದ ಅಮೃತಮಹೋತ್ಸವದ ನೆನಪಿನಲ್ಲಿ ಇನ್ನಷ್ಟು ಜನಪರ ಕೆಲಸಗಳನ್ನು ಕೈಗೊಳ್ಳುವ ಉದ್ದೇಶದಿಂದ ಸ್ಥಳೀಯ ಆರ್ಥಿಕವಾಗಿ ಹಿಂದುಳಿದ ಅಸಹಾಯಕ ರೋಗಿಗಳನ್ನು ಕೊಂಡೊಯ್ಯಲು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸುವ ಮಹತ್ವಪೂರ್ಣ ಯೋಜನೆಯನ್ನು ಕೈಗೊಂಡಿದೆ. ಇದೇ ಬರುವ ತಾರೀಕು ಎಪ್ರೀಲ್ 29 ರಂದು ಪಕ್ಕಲಡ್ಕ ಯುವಕ ಮಂಡಲದ ಮೈದಾನದಲ್ಲಿ ಬಹಿರಂಗ ವಾರ್ಷಿಕೋತ್ಸವ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳ್ಳಲಿದೆ. ಇದೇ ವೇಳೆ ಪಿವೈಎಮ್ ಡಾನ್ಸ್ ತರಬೇತಿ ಕೇಂದ್ರ, ಯುವಕ ಮಂಡಲದ ಮಾಜಿ ನಾಯಕ ಕೊರಗಪ್ಪ ಕೊಟ್ಟಾರಿ ಸ್ಮರಣಾರ್ಥ ಗ್ರಂಥಾಲಯ ಉದ್ಘಾಟನೆಗೊಳ್ಳಲಿದೆ ಎಂದು ಪಕ್ಕಲಡ್ಕ ಯುವಕ ಮಂಡಲದ ಅಧ್ಯಕ್ಷರಾದ ದೀಪಕ್ ಬಜಾಲ್, ಕಾರ್ಯದರ್ಶಿ ಪ್ರೀತೇಶ್ ತಲವಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು