4:50 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್‌ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ

20/03/2022, 15:58

ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ. ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು