7:31 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಪಕ್ಷ ತೊರೆದವರು ಪ್ರಧಾನಿ ಮೋದಿಗಾಗಿ ಮತ್ತೆ ವಾಪಸ್ ಬನ್ನಿ: ಶೆಟ್ಟರ್, ಸವದಿಗೆ ಕೇಂದ್ರ ಸಚಿವೆ ಕರಂದ್ಲಾಜೆ ಪರೋಕ್ಷ ಆಹ್ವಾನ

19/08/2023, 17:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯಾರೇ ಬಿಜೆಪಿ ಬಿಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿಗಾಗಿ ಅವರಿಗೆ ಪಕ್ಷದಲ್ಲಿ ಮತ್ತೆ ಸ್ವಾಗತವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಹಾಗೂ‌ ಲಕ್ಷ್ಮಣ ಸವದಿಗೆ ಆಹ್ವಾನ ನೀಡಿದ್ದಾರೆ.
ಪಕ್ಷ ಬಿಟ್ಟೋದವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ. ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಇಂಡಿಯ ಹಾಗೂ ಹುಡುಕಿದರೂ ಯಾವ ಪಾರ್ಟಿಯಲ್ಲೂ ಸಿಗಲ್ಲ ಎಂದು ಕರಂದ್ಲಾಜೆ ಅವರು aksಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.
ಯಾರೇ ಪಕ್ಷ ಬಿಟ್ಟಿದ್ದರೂ ಪ್ರಧಾನಿ ಮೋದಿಗಾಗಿ ಅವರು ವಾಪಸ್ ಬರಲು ಸ್ವಾಗತವಿದೆ ಅನ್ನೋದು ನನ್ನ ಪ್ರಾರ್ಥನೆ. ನಮ್ಮ ದೇಶದ ನಾಯಕನನ್ನು ಇಂದು ಪ್ರಪಂಚ ಒಪ್ಪುತ್ತಿದೆ. ಅವರನ್ನ
ಮತ್ತೆ ಪಿಎಂ ಮಾಡಲು ಯಾರೇ ಪಾರ್ಟಿ ಬಿಟ್ಟಿದರೂ ವಾಪಸ್ ಬರಲು ವಿನಂತಿ. ಮೋದಿಗಾಗಿ, ದೇಶಕ್ಕಾಗಿ, ಮುಂದಿನ ಪೀಳಿಗೆಗಾಗಿ ಬರಬೇಕಿದೆ. ವಿಶ್ವದಲ್ಲಿ ಶಾಂತಿ ನೆಲೆಸುವ ಸಲುವಾಗಿ ಬರಬೇಕಿದೆ.
ಎಲ್ಲರೂ ಒಗ್ಗೂಡಿ ಬಿಜೆಪಿ-ದೇಶವನ್ನ ಕಟ್ಟಬೇಕಿದೆ
ಎಂದು ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು