2:01 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

28/12/2021, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು ಕೃತಿಯ ಬಗ್ಗೆ ಮಾತನಾಡಿದರು.

ತೇಜಸ್ವಿ ಅವರು ಪ್ರತಿಯೊಂದು ಪಕ್ಷಿಯ ಬಗ್ಗೆ ವೈಜ್ಞಾನಿಕ ವಿವರಗಳನ್ನು ಕೊಡುವುದರ ಜೊತೆಗೆ ಕಥೆಗಳ ಮೂಲಕ ಪಕ್ಷಿ ಜಗತ್ತಿನ ಕುರಿತು ಕುತೂಹಲವನ್ನು ಈ ಕೃತಿಯಲ್ಲಿ ಮೂಡಿಸಿದ್ದಾರೆ. ಇದು ಈ ಕೃತಿಯ ವಿಶೇಷತೆ. ಪಕ್ಷಿಗಳ ಬಗ್ಗೆ ಆರಂಭಿಕ ಹಂತದಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳಲು ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ ಎಂದರು.

ಪಕ್ಷಿಗಳು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಿದವರು ತೇಜಸ್ವಿ. ತೇಜಸ್ವಿ ಅವರು, ಆತ್ಮಗಳಿರುವ, ವ್ಯಕ್ತಿತ್ವ ಇರುವ ಜೀವಗಳಾಗಿ ಪಕ್ಷಿಗಳನ್ನು ಕಂಡವರು. ಮಕ್ಕಳು ಈ ಕೃತಿಯನ್ನು ಓದುವಂತಾದರೆ ಹಕ್ಕಿಗಳ ಬಗ್ಗೆ ಮಕ್ಕಳಿಗೆ ಬೆರಗು ಮೂಡುತ್ತದೆ. ಪೋಷಕರು ಇಂತಹ ಕೃತಿಗಳನ್ನು ಮಕ್ಕಳಿಗೆ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು