11:50 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

28/12/2021, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು ಕೃತಿಯ ಬಗ್ಗೆ ಮಾತನಾಡಿದರು.

ತೇಜಸ್ವಿ ಅವರು ಪ್ರತಿಯೊಂದು ಪಕ್ಷಿಯ ಬಗ್ಗೆ ವೈಜ್ಞಾನಿಕ ವಿವರಗಳನ್ನು ಕೊಡುವುದರ ಜೊತೆಗೆ ಕಥೆಗಳ ಮೂಲಕ ಪಕ್ಷಿ ಜಗತ್ತಿನ ಕುರಿತು ಕುತೂಹಲವನ್ನು ಈ ಕೃತಿಯಲ್ಲಿ ಮೂಡಿಸಿದ್ದಾರೆ. ಇದು ಈ ಕೃತಿಯ ವಿಶೇಷತೆ. ಪಕ್ಷಿಗಳ ಬಗ್ಗೆ ಆರಂಭಿಕ ಹಂತದಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳಲು ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ ಎಂದರು.

ಪಕ್ಷಿಗಳು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಿದವರು ತೇಜಸ್ವಿ. ತೇಜಸ್ವಿ ಅವರು, ಆತ್ಮಗಳಿರುವ, ವ್ಯಕ್ತಿತ್ವ ಇರುವ ಜೀವಗಳಾಗಿ ಪಕ್ಷಿಗಳನ್ನು ಕಂಡವರು. ಮಕ್ಕಳು ಈ ಕೃತಿಯನ್ನು ಓದುವಂತಾದರೆ ಹಕ್ಕಿಗಳ ಬಗ್ಗೆ ಮಕ್ಕಳಿಗೆ ಬೆರಗು ಮೂಡುತ್ತದೆ. ಪೋಷಕರು ಇಂತಹ ಕೃತಿಗಳನ್ನು ಮಕ್ಕಳಿಗೆ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು