7:17 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಾಲಿಕೆ ಮಾಡಬೇಕಿದ್ದ ಕೆಲಸವನ್ನು ಪೊಲೀಸ್ ಇಲಾಖೆ ಮಾಡಿತು!: ಕೆಪಿಟಿ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿದ್ದ ಅಲಂಕಾರಿಕ ಗಿಡ ತೆರವು

17/06/2023, 15:03

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಸ್ತೆಯ ಡಿವೈಡರ್ ಮತ್ತು ಸರ್ಕಲ್ ಗಳಲ್ಲಿ ನಿರ್ಮಿಸಿದ ಮಿನಿ ಗಾರ್ಡನ್ ಗಳು ನಗರದ ಸುಂದರವನ್ನು ವೃದ್ಧಿಸಿದರೆ, ಕೆಲವೊಮ್ಮೆ ನಗರದೊಳಗೆ ವಾಹನ ಅಪಘಾತಕ್ಕೂ ಕಾರಣವಾಗುತ್ತದೆ. ಡಿವೈಡರ್ ಮತ್ತು ಸರ್ಕಲ್ ನಲ್ಲಿ ನಿರ್ಮಿಸಿದ ಗಾರ್ಡ್ ನ ಎದುರುಗಡೆಯ ರಸ್ತೆಗೆ ಅಡ್ಡವಾಗಿ ಬೆಳೆದರೆ ಅದು ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಅಂಥದೊಂದು ಸನ್ನಿವೇಶ ನಗರದ ಕೆಪಿಟಿ ಜಂಕ್ಷನ್ ನಲ್ಲಿ ನಡೆದಿದೆ.
ಕೆಪಿಟಿ ಜಂಕ್ಷನ್ ನಲ್ಲಿರುವ ಸಣ್ಣ ವೃತ್ತದಲ್ಲಿ ಗಾರ್ಡನ್ ಬೆಳೆಸಲಾಗಿದೆ.


ಗಿಡಗಳು ಸೊಂಪಾಗಿ ದಟ್ಟವಾಗಿ ಎತ್ತರಕ್ಕೆ ಬೆಳೆದಿದೆ. ವೃತ್ತವೇನೋ ಗಾರ್ಡನ್ ನಿಂದ ತುಂಬಾ ಸೊಗಸಾಗಿ ಕಾಣುತ್ತಿದೆ. ಆದರೆ ದಟ್ಟವಾಗಿ, ಎತ್ತರಕ್ಕೆ ಬೆಳೆದ ಅಲಂಕಾರಿಗಳ ಗಿಡಗಳು ರಸ್ತೆಗೆ ಪೂರ್ತಿ ಅಡ್ಡವಾಗಿದೆ. ಬಿಜೈ ಕಡೆಯಿಂದ ನಂತೂರು ಭಾಗಕ್ಕೆ ಸಂಚರಿಸುವ ವಾಹನ ಸವಾರರಿಗೆ ಎದುರುಗಡೆಯ ರಸ್ತೆ ಕಾಣದಷ್ಟು ಅಲಂಕಾರಿಕ ಗಿಡಗಳು ಬೆಳೆದಿವೆ. ಇದೇ ಪರಿಸ್ಥಿತಿ ಏರ್ ಪೊರ್ಟ್ ರೋಡಿನಿಂದ ಬಿಜೈ ಕಡೆಗೆ ಬರುವ ವಾಹನ ಸವಾರರದ್ದಾಗಿದೆ. ಏರ್ ಪೊರ್ಟ್ ಕಡೆಯಿಂದ ಬಿಜೈಯತ್ತ ಸಾಗುವ ವಾಹನ ಸವಾರರಿಗೂ ಇಲ್ಲಿ ರಸ್ತೆ ಕಾಣೊಲ್ಲ. ಈ ಕುರಿತು ಸಾರ್ವಜನಿಕರೊಬ್ಬರು ಎಸಿಪಿ ಗೀತಾ ಕುಲಕರ್ಣಿ ಅವರಿಗೆ ದೂರು ನೀಡಿದ್ದರು. ಸುಗಮ ಸಂಚಾರದ ಹಿನ್ನೆಲೆಯಲ್ಲಿ ಎಸಿಪಿ ಗೀತಾ ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗೋಪಾಲಕೃಷ್ಣ ಅವರ ನೇತೃತ್ದಲ್ಲಿ ರಸ್ತೆಗೆ ತಡೆಯಾಗಿ ಬೆಳೆದು ನಿಂತಿದ್ದ ಅಲಂಕಾರಿಕ ಗಿಡಗಳನ್ನು ಸೋಮವಾರ ಟ್ರಿಮ್ ಮಾಡಲಾಯಿತು. ಪಾಲಿಕೆ ಮಾಡಬೇಕಾದ ಕೆಲಸವನ್ನು ಪೊಲೀಸ್ ಇಲಾಖೆಯೇ ಮಾಡಿತು. ಕಾನ್ ಸ್ಟೇಬಲ್ ಒಬ್ಬರು ಗಿಡಗಳನ್ನು ಟ್ರಿಮ್ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು