9:13 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ: ಜನಪರ ಹೋರಾಟದ ಭರವಸೆ

05/10/2023, 21:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):
ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು.


ನಿಕಟಪೂರ್ವ ಪ್ರತಿಪಕ್ಷ ನಾಯಕ ನವೀನ್ ಡಿಸೋಜ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆ.ಆರ್. ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೋ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಚುನಾವಣೆಯ ಸಂದರ್ಭ 44ಕ್ಕೂ ಹೆಚ್ಚು ಸದಸ್ಯರನ್ನು ಆರಿಸಿ ಕಳಿಸುತ್ತೇವೆ.


ಪ್ರವೀಣ್ ಚಂದ್ರ ಆಳ್ವ ಅವರು ವಿಪಕ್ಷ ನಾಯಕನಾಗಿ ಬಿಜೆಪಿಯ ದುರಾಡಳಿತದ ವಿರುದ್ಧ ಎಚ್ಚರಿಸುವ ಹಾಗೂ ಜನಪರ ಸಮರ್ಥ ಹೋರಾಟವನ್ನು ನಡೆಸುವ ಭರವಸೆ ಇದೆ ಎಂದು ನುಡಿದರು.
ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು.
ಬಿಜೆಪಿಯ ತಪ್ಪುಗಳನ್ನ ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಹಾರಿಸಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.








ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು. ಕಾಂಗ್ರೆಸ್ ನಾಯಕ ಮಿಥುನ್ ರೈ,
ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್, ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್,
ಟಿ.ಕೆ ಸುಧೀರ್, ಪದ್ಮರಾಜ್ ಆರ್., ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್, ಶಾಲೆಟ್ ಪಿಂಟೋ, ಮಮತಾ ಗಟ್ಟಿ,ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ,ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು