6:04 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ: ಜನಪರ ಹೋರಾಟದ ಭರವಸೆ

05/10/2023, 21:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):
ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು.


ನಿಕಟಪೂರ್ವ ಪ್ರತಿಪಕ್ಷ ನಾಯಕ ನವೀನ್ ಡಿಸೋಜ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆ.ಆರ್. ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೋ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಚುನಾವಣೆಯ ಸಂದರ್ಭ 44ಕ್ಕೂ ಹೆಚ್ಚು ಸದಸ್ಯರನ್ನು ಆರಿಸಿ ಕಳಿಸುತ್ತೇವೆ.


ಪ್ರವೀಣ್ ಚಂದ್ರ ಆಳ್ವ ಅವರು ವಿಪಕ್ಷ ನಾಯಕನಾಗಿ ಬಿಜೆಪಿಯ ದುರಾಡಳಿತದ ವಿರುದ್ಧ ಎಚ್ಚರಿಸುವ ಹಾಗೂ ಜನಪರ ಸಮರ್ಥ ಹೋರಾಟವನ್ನು ನಡೆಸುವ ಭರವಸೆ ಇದೆ ಎಂದು ನುಡಿದರು.
ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು.
ಬಿಜೆಪಿಯ ತಪ್ಪುಗಳನ್ನ ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಹಾರಿಸಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.








ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು. ಕಾಂಗ್ರೆಸ್ ನಾಯಕ ಮಿಥುನ್ ರೈ,
ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್, ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್,
ಟಿ.ಕೆ ಸುಧೀರ್, ಪದ್ಮರಾಜ್ ಆರ್., ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್, ಶಾಲೆಟ್ ಪಿಂಟೋ, ಮಮತಾ ಗಟ್ಟಿ,ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ,ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು