2:45 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ನೂರಾರು ಕೋಟಿ ಅಭಿವೃದ್ದಿ ಕಾಮಗಾರಿಗೆ ತೀವ್ರ ತೊಂದರೆ: ಶಾಸಕ ವೇದವ್ಯಾಸ ಕಾಮತ್

02/06/2023, 20:35

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆಯಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ಮುಂದಿನ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರಕಾರ ತಡೆ ನೀಡಿ ಆದೇಶ ಹೊರಡಿಸಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಅನುಷ್ಠಾನದ ಹಂತದಲ್ಲಿರುವ ನೂರಾರು ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಮಸ್ಯೆ ಆಗಲಿದೆ. ರಾಜಕೀಯ ಕಾರಣಕ್ಕಾಗಿ ಸರಕಾರ ಹೊರಡಿಸಿದ ಈ ಆದೇಶದಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಅನುಭವಿಸಬೇಕಾಗುತ್ತದೆ. ಸರಕಾರದ ಈ ನಡೆ ಖಂಡನೀಯ ಎಂದು ಕಾಮತ್ ತಿಳಿಸಿದ್ದಾರೆ.
ಈಗಾಗಲೇ ಮಳೆಗಾಲ ಆರಂಭ ಆಗಿರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಹತ್ತಾರು ಕಾಮಗಾರಿಗಳು ತುರ್ತಾಗಿ ಆಗಬೇಕಿದೆ. ಮಂಗಳೂರು ನಗರದಲ್ಲಿ ವಿಪರೀತ ಮಳೆ ಸುರಿಯುವುದರಿಂದ ಅಲ್ಲಲ್ಲಿ ನೆರೆ ಸಮಸ್ಯೆಗಳು ಉಂಟಾಗುತ್ತವೆ. ಕಾಮಗಾರಿಗಳು ನಿಂತು ಹೋದರೆ ಜನರ ಬದುಕು ನರಕಯಾತನೆ ಆಗಲಿದೆ. ಅನೇಕ ಕಡೆಗಳಲ್ಲಿ ರಸ್ತೆಯಲ್ಲಿ ನಡೆದಾಡಲೂ ಸಮಸ್ಯೆ ಆಗಲಿದೆ. ಕುಡಿಯುವ ನೀರಿನ ಕಾಮಗಾರಿ, ರಾಜಕಾಲುವೆಗಳಿಗೆ ತಡೆಗೋಡೆ ಕಾಮಗಾರಿಗಳು, ಚರಂಡಿ ನಿರ್ಮಾಣ, ಸ್ಮಾರ್ಟ್ ಸಿಟಿ ಯೋಜನೆಗಳು ಸೇರಿದಂತೆ ಹಲವು ಕಾಮಗಾರಿಗಳು ತುರ್ತಾಗಿ ನಡೆಯಬೇಕಿವೆ. ಆದರೆ ಈಗ ರಾಜ್ಯ ಸರಕಾರದ ಆದೇಶದಿಂದ ಎಲ್ಲದಕ್ಕೂ ತಡೆ ಬಿದ್ದಿದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಆಡಳಿತ ನಡೆಸುವುದು ಸರಕಾರದ ಜನವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಯಾವುದೇ ಸರಕಾರ ಅಧಿಕಾರ ನಡೆಸುವಾಗ ರಾಜಕೀಯ ದ್ವೇಷದ ಅಡಿಯಲ್ಲಿ ನಿರ್ಧಾರ ಕೈಗೊಳ್ಳಬಾರದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಾಜಕೀಯ ಹಗೆತನ ಸಾಧಿಸುವ ಸಲುವಾಗಿ ಈ ಕೆಟ್ಟ ನಿರ್ಧಾರ ಕೈಗೊಂಡಿದೆ. ಸರಕಾರದ ಈ ನಡೆಯಿಂದಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಆಗಲಿದೆ. ತಕ್ಷಣ ಸರಕಾರ ಈ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಅವರು ಆಗ್ರಹಿಸಿದ್ದಾರೆ.
ಯಾವುದೇ ಸ್ಪಷ್ಟ ಕಾರಣ ಇಲ್ಲದೆ ಸರಕಾರ ಈ ನಿರ್ಧಾರ ಕೈಗೊಂಡಿದೆ. ಅನುದಾನ ತಡೆದು ಟೆಂಡರ್ ಆಗಿರುವ ಕಾಮಗಾರಿಗಳ ಗುತ್ತಿಗೆದಾರರನ್ನು ಬ್ಯ್ಲಾಕ್ ಮೇಲ್ ಮಾಡಿ ಕಮಿಷನ್ ಹೊಡೆಯುವ ದಂಧೆಯ ಭಾಗವಾಗಿ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಮುಂದೆ ಆಗುವ ಎಲ್ಲ ಸಮಸ್ಯೆಗಳಿಗೆ ಕಾಂಗ್ರೆಸ್ ನೇತೃತ್ವದ ಸರಕಾರವೇ ನೇರ ಹೊಣೆ ಎಂದು ಶಾಸಕ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು