7:21 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಪಳ್ಳಿ ಪಂಚಾಯತ್‌ನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ; ಓದುವ ಹವ್ಯಾಸ ಹೆಚ್ಚಾಗಲಿ: ಸಚಿವ ಸುನಿಲ್ ಕುಮಾರ್

19/10/2022, 12:30

ಕಾರ್ಕಳ(reporterkarnataka.com): ಉತ್ತಮ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನ ವೃದ್ಧಿಯಾಗುತ್ತದೆ. ಮಕ್ಕಳಿಗೆ ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಅವರು ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಡಿಜಿ ವಿಕಸನ , ಡೆಲ್ ಮತ್ತು ಶಿಕ್ಷಣ ಫೌಂಡೇಶನ್ ವತಿಯಿಂದ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜದ ಪ್ರತಿಯೊಂದು ಕ್ಷೇತ್ರಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಅಳವಡಿಕೆಯಾಗುತ್ತಿದ್ದು, ಮಹತ್ತರವಾದ ಬೆಳವಣಿಗೆಯಾಗುತ್ತಿದೆ. ಪಳ್ಳಿ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಕೂಡ ಡಿಜಿಟಲೀಕರಣವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದವರು ಹೇಳಿದರು.

ಪಂಚಾಯತ್ ಅಧ್ಯಕ್ಷ ಸಂದೀಪ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಫೌಂಡೇಷನ್‌ನ ಸಂಯೋಜಕಿ ರೀನಾ ಹೆಗ್ಡೆ ಅವರು ಡಿಜಿಟಲ್ ಗ್ರಂಥಾಲಯದ ಬಗ್ಗೆ ಮಾಹಿತಿ ನೀಡಿದರು.
ಗ್ರಂಥಾಲಯದ ಮೇಲ್ವಿಚಾರಕಿ ಸುಷ್ಮಾ ನಾಯಕ್ ಮಾತನಾಡಿ, ಗ್ರಾಮ ಪಂಚಾಯತ್‌ನಿಂದ ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನವಾಗುವಂತೆ ಒತ್ತು ನೀಡಲಾಗಿದೆ. ಪಂಚಾಯತ್‌ನ ೧೨ ರಿಂದ ೬೦ ವರ್ಷದ ವರೆಗಿನ ಸಾರ್ವಜನಿಕರಿಗೆ ಕಂಪ್ಯೂಟರ್, ಇಂಟರ್ನೆಟ್, ಬ್ಯಾಂಕ್ ವಹಿವಾಟು, ವೃತ್ತಿ ಮಾರ್ಗದರ್ಶನ, ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಪ್ರತೀ ಭಾನುವಾರ ಪೂರ್ವಾಹ್ನ ೧೦ ರಿಂದ ೧೨ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋನಾಧಿಕಾರಿ ಬಾಬು, ಪಂಚಾಯತ್ ಉಪಾಧ್ಯಕ್ಷ ಲಕ್ಷ್ಮಿ ಶೆಟ್ಟಿ, ಪಿಡಿಒ ಪ್ರಮೀಳಾ ನಾಯಕ್, ಪಂಚಾಯತ್‌ನ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಗ್ರಂಥಾಲಯದ ಶಿಕ್ಷಕಿ ಚೈತ್ರಾ ಸ್ವಾಗತಿಸಿ, ವಿಜಯಲಕ್ಷ್ಮೀ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು